9 ದಿನ ಅಜ್ಞಾತವಾಸದ ಬಳಿಕ ರಮೇಶ್​ ಜಾರಕಿಹೊಳಿ ಕೊನೆಗೂ ಪ್ರತ್ಯಕ್ಷ

Published : Jan 02, 2019, 02:25 PM IST
9 ದಿನ ಅಜ್ಞಾತವಾಸದ ಬಳಿಕ ರಮೇಶ್​ ಜಾರಕಿಹೊಳಿ ಕೊನೆಗೂ ಪ್ರತ್ಯಕ್ಷ

ಸಾರಾಂಶ

ಮಂತ್ರಿ ಸ್ಥಾನ ಕಿತ್ತುಕೊಂಡಿದ್ದರಿಂದ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು 9 ದಿನದ ಅಜ್ಞಾತವಾಸದ ಬಳಿಕ ರಮೇಶ್​ ಜಾರಕಿಹೊಳಿ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಹಾಗಾದರೆ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ?

ಬೆಳಗಾವಿ, (ಜ.02): ಸಚಿವ ಸಂಪುಟದಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಿಡಿದೆದ್ದಿದ್ದ ರಮೇಶ್​ ಜಾರಕಿಹೊಳಿ ಅಜ್ಞಾತ ಸ್ಥಳದಿಂದ ಹೊರಬಂದಿದ್ದಾರೆ.

ಕಾಂಗ್ರೆಸ್ ನಾಯಕರ ನಡೆಗೆ ಮುನಿಸಿಕೊಂಡು ಯಾರ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಿಂದ ರಮೇಶ್ ಜಾರಕಿಹೊಳಿ ಅವರು ಮೈತ್ರಿ ಸರ್ಕಾರವನ್ನು ನಡುಗಿಸಿದ್ದರು. ಆದ್ರೆ ಇಂದು [ಬುಧವಾರ] ರಮೇಶ್ ಜಾರಕಿಹೊಳಿ ಅವರು ತಮ್ಮ ಗೋಕಾಕ್ ನಿವಾಸದಲ್ಲಿ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ.

7 ದಿನವಾದರೂ ರಮೇಶ್ ಸುಳಿವಿಲ್ಲ; ‘ಮೈತ್ರಿ’ಗೆ ನಿದ್ದೆಯಿಲ್ಲ?

ಕಳೆದ 9 ದಿನಗಳಿಂದ ನಿಗೂಢ ನಡೆ ಕಾಯ್ದುಕೊಂಡಿದ್ದ ರಮೇಶ್​ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬ ಯಾವ ಮಾಹಿತಿ ಕೂಡ ಯಾರಿಗೂ ಇರಲಿಲ್ಲ. ಮೂಲಗಳ ಪ್ರಕಾರ ದೆಹಲಿಯಲ್ಲಿ ಬೀಡುಬಿಟ್ಟಿದ್ದರು ಎಂದು ಹೇಳಲಾಗಿತ್ತು. 

ತಂದೆಯ ಶ್ರದ್ಧಾಂಜಲಿಗೂ ಗೈರಾದ ರಮೇಶ್ ಜಾರಕಿಹೊಳಿ ಎಲ್ಲಿ..?

ಅಷ್ಟೇ ಅಲ್ಲದೇ ರಮೇಶ್​ ಜಾರಕಿಹೊಳಿ ದೆಹಲಿಯಲ್ಲಿಯೇ ಠಿಕಾಣಿ ಹೂಡಿ ಮೈತ್ರಿ ಸರ್ಕಾರವನ್ನು ಕೆಡುವಲು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಗಳು ಕೂಡ ರಾಜ್ಯ ರಾಜಕಾರಣದಲ್ಲಿ ಹಬ್ಬಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Cockroach Janata Party ಅಸಲಿ ಮುಖ ಬಯಲು?: ಪ್ರಧಾನಿ ಮೋದಿ ವಿರುದ್ಧ ಸಂಚಿಗೆ ಗಡಿಯಾಚೆ ಪ್ಲಾನ್? ರಾಜೀವ್ ಚಂದ್ರಶೇಖರ್ ಸ್ಫೋಟಕ ಹೇಳಿಕೆ!
Cockroach Janata Part: ಕಾಕ್ರೋಚ್ ಭಯ ಕಾಂಗ್ರೆಸ್‌ಗೆ ಹೊರತು ಬಿಜೆಪಿಗಲ್ಲ; ಪ್ರಲ್ಹಾದ್ ಜೋಶಿ ಕೊಟ್ಟ ಉತ್ತರ ಕೇಳಿ ಶಾಕ್!