ಮಂತ್ರಿಗಿರಿ ಬಗ್ಗೆ ಮಾತಾಡಲ್ಲ: ವಿಶ್ವನಾಥ್‌

Kannadaprabha News   | Asianet News
Published : Feb 04, 2020, 09:57 AM IST
ಮಂತ್ರಿಗಿರಿ ಬಗ್ಗೆ ಮಾತಾಡಲ್ಲ: ವಿಶ್ವನಾಥ್‌

ಸಾರಾಂಶ

ಹುಣಸೂರು ಮಾಜಿ ಶಾಸಕ ಎಚ್. ವಿಶ್ವನಾಥ್ ಸಚಿವ ಸಂಪುಟದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇದರ ಬೆನಲ್ಲೇ ಸಚಿವ ಸ್ಥಾನ ಕೊಡುವುದು, ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟವಿಚಾರವಾಗಿದೆ ಎನ್ನುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಬೆಂಗಳೂರು(ಫೆ.04): ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂಬುದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದೆಲ್ಲ ಮುಗಿದ ಅಧ್ಯಾಯವಾಗಿದೆ. ನಮಗೆ ಅಧಿಕಾರ ಕೊಡುವ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸಚಿವ ವಿ.ಸೋಮಣ್ಣ ಅವರೊಡನೆ ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ಸಚಿವ ಸ್ಥಾನ ಕೊಡುವುದು, ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟವಿಚಾರವಾಗಿದೆ. ನಾನು ಮಂತ್ರಿ ಸ್ಥಾನ ಕೊಡಿ ಅಂತ ಮುಖ್ಯಮಂತ್ರಿಗಳಿಗೆ ಕೇಳಿಲ್ಲ. ಮುಂದೆಯೂ ಆ ಬಗ್ಗೆ ಮಾತನಾಡುವುದಿಲ್ಲ. ಮುಖ್ಯಮಂತ್ರಿಗಳಿಗೆ ಎಲ್ಲವೂ ಗೊತ್ತಿದೆ. ಯಾರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ ಎಂದು ಹೇಳಿದರು.

ಸಂಪುಟ ವಿಸ್ತರಣೆ: ಹಳ್ಳಿಹಕ್ಕಿಗೆ ಮದ್ದು ಕೊಟ್ಟ BSY, ಮೀಟಿಂಗ್ ಸಕ್ಸಸ್

ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂಬುದರ ಕುರಿತು ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಅದಕ್ಕೆ ಕ್ರಿಯೆ-ಪ್ರತಿಕ್ರಿಯೆ ಬಂದಿದೆ. ಮುಂದಿನ ದಿನಗಳಲ್ಲಿ ನಮಗೆ ಅವಕಾಶ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.

ಹಳ್ಳಿ ಹಕ್ಕಿಗೆ ಒಳ್ಳೆ ದಿನ-ಸೋಮಣ್ಣ:

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ ಅವರು, ವಿಶ್ವನಾಥ್‌ ಅವರು ಹಿರಿಯ ರಾಜಕಾರಣಿ. ಅವರಿಗೆ ಸಚಿವ ಸ್ಥಾನ ಎಂಬುದು ಮುಖ್ಯವೂ ಅಲ್ಲ ಗೌಣವೂ ಅಲ್ಲ ಎಂದರು. ಮುಂದಿನ ದಿನಗಳಲ್ಲಿ ಹಳ್ಳಿ ಹಕ್ಕಿ (ವಿಶ್ವನಾಥ್‌)ಗೂ ಒಳ್ಳೆಯ ದಿನಗಳು ಬರಲಿವೆ. ಸ್ವತಂತ್ರವಾಗಿ ಹಾರಾಡುವ ದಿನಗಳು ದೂರವಿಲ್ಲ ಎಂದು ಹೇಳಿದರು.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ
ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ