
ಬೆಂಗಳೂರು(ಮೇ.28): ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಆಶ್ವಾಸನೆಗಳು ಬಿಜೆಪಿಯ ಸೋಲಿಗೆ ಕಾರಣವಾಗಿದ್ದು, ಗ್ಯಾರಂಟಿಗಳನ್ನು 24 ಗಂಟೆಯೊಳಗೆ ಈಡೇರಿಸುವ ಭರವಸೆ ನೀಡಿ ಈಗ ಅಧಿಕಾರಕ್ಕೆ ಬಂದ ಮೇಲೆ ಕುಂಟುನೆಪ ಹೇಳಿ ಷರತ್ತುಗಳನ್ನು ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಟೀಕಾಪ್ರಹಾರ ನಡೆಸಿದ್ದಾರೆ.
ಶನಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಹೇಳಿಕೊಂಡು ಜನರ ದಿಕ್ಕು ತಪ್ಪಿಸುತ್ತಿದೆ. ಗ್ಯಾರಂಟಿ ಆಶ್ವಾಸನೆಗಳ ಮೂಲಕ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಹೀಗಾಗಿ ನಾವು ಸೋಲು ಅನುಭವಿಸಬೇಕಾಯಿತು. ಮುಂದಿನ ದಿನದಲ್ಲಿ ಮತ್ತೆ ಪುಟಿದೇಳುತ್ತೇವೆ. ಆಶ್ವಾಸನೆಗಳನ್ನು ಈಡೇರಿಸದಿದ್ದರೆ ಮಹಿಳೆಯರು ರೊಚ್ಚಿಗೇಳಲಿದ್ದಾರೆ. ಈಡೇರಿಸಲು ಸಾಧ್ಯವಾಗದಿದ್ದರೆ ಸುಳ್ಳು ಆಶ್ವಾಸನೆ ಯಾಕೆ ಕೊಡಬೇಕು ಎಂದು ಕಿಡಿಕಾರಿದರು.
ಮುಂದಿನ ಕ್ಯಾಬಿನೆಟ್ನಲ್ಲಿ ಗ್ಯಾರಂಟಿಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ
ಷರತ್ತುಗಳನ್ನು ಹಾಕಿದರೆ ಯಾರಿಗೆ ಉಪಯೋಗವಾಗುತ್ತದೆ? ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಮುಂದಿನ ದಿನದಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ಜೀವನದಲ್ಲಿ ಸೋಲು ಇಲ್ಲದ ನಾವು ಇಂದು ಸೋತಿದ್ದೇವೆ. ಸುಳ್ಳು ಆಶ್ವಾಸನೆಗಳ ಕಾರಣ ನಮಗೆ ಸೋಲಾಗಿದೆ. ಈ ಸರ್ಕಾರ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.