
ರಾಮನಗರ(ಸೆ.07): ‘ನೀವೇ ನೋಡಿದ್ದೀರಾ, ನಡುಕ ಯಾರಿಗೆ ಆಗುತ್ತಿತ್ತು ಅಂತ. ಅವರೇ ತೂರಾಡಿಕೊಂಡು ನಡೆಯುತ್ತಿದ್ದರು. ನಡುಕ ಏನಿದ್ದರು ಅವರಿಗೆ ಮತ್ತು ಅವರ ಪಕ್ಕಕ್ಕೆ, ನಮಗಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ಅಶ್ವತ್ಥ ನಾರಾಯಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಇಂಡಿಯಾ ಕೂಟದಿಂದಾಗಿ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ನೀವೇ ನೋಡಿದ್ದೀರಾ, ನಡುಕ ಯಾರಿಗೆ ಆಗುತ್ತಿತ್ತು ಅಂತ. ನೀವೇ ನೋಡಿದ್ದೀರಲ್ಲ, ತೂರಾಡಿಕೊಂಡು ನಡಿತಿದ್ದರು. ಎಲ್ಲರ ಮನೆ ಬಾಗಿಲಿಗೆ ಹೋಗಿ ನಮ್ಮ ಜೊತೆಗೆ ಬನ್ನಿ ಅನ್ನೋ ಹಾಗಿದೆ. ಅವರ ಹೇಳಿಕೆ ಕಾಮಿಡಿ ಆಗಿದೆ. ನಡುಕ ಎಲ್ಲಾ ಅವರಿಗೆ, ಅವರ ಪಕ್ಷಕ್ಕಿದೆ ನಮಗಲ್ಲ’ ಎಂದು ತಿರುಗೇಟು ನೀಡಿದರು.
15 ಶಾಸಕರಿಗೆ ಮಾತ್ರ ನಿಗಮ ಅಧ್ಯಕ್ಷಗಿರಿ, 2.5 ವರ್ಷ ಮಾತ್ರ ಅಧಿಕಾರಾವಧಿ: ಡಿಕೆಶಿ
ಡಿಕೆ ಸಹೋದರರು ಕಳ್ಳ ಮಾರ್ಗದಲ್ಲಿ ಕನಕಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದ್ದಾರೆ. ಕಾಲೇಜು ಸ್ಥಳಾಂತರ ವಿರೋಧಿಸಿ ಸೆ.8ರಂದು ನಡೆಯಲಿರುವ ರಾಮನಗರ ಬಂದ್ ಮಾತ್ರವಲ್ಲ, ಎಲ್ಲ ಹೋರಾಟಕ್ಕೂ ನಮ್ಮ ಬೆಂಬಲವಿದೆ ಎಂದು ಅವರು ಹೇಳಿದರು.
ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂಬ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಇಡೀ ವಿಶ್ವದಲ್ಲಿ ತಾಯಿ ಸ್ಥಾನದಲ್ಲಿರುವುದು ನಮ್ಮ ಸನಾತನ ಧರ್ಮ. ವೇದ ಉಪನಿಷತ್ತುಗಳಲ್ಲಿ ಸನಾತನ ಧರ್ಮ ಯಾವ ರೀತಿ ಹುಟ್ಟಿತು ಅನ್ನೋ ಇತಿಹಾಸ ಇದೆ. ಅವರ ಹೆಸರು ಪರಮೇಶ್ವರ್. ಅವರ ಹೆಸರು ಎಲ್ಲಿಂದ ಬಂತು ಎಂಬುದಕ್ಕೆ ಅವರನ್ನೇ ಕೇಳಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.