
ಬೆಂಗಳೂರು/ಚಿತ್ರದುರ್ಗ, (ಫೆ.03): ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಮಂಜುನಾಥ್ (92) ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಂಜುನಾಥ್ ಇಂದು (ಸೋಮವಾರ) ಮಧ್ಯಾಹ್ನ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಸೋತವರಿಗೆ ಮಂತ್ರಿಗಿರಿ, ಟೀಂ ಇಂಡಿಯಾದಲ್ಲಿ ರಾಹುಲ್ ಸವಾರಿ; ಫೆ.03ರ ಟಾಪ್ 10 ಸುದ್ದಿ!
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾ. ಜಾಜೂರು ಗ್ರಾಮದವರಾಗಿರುವ ಮಂಜುನಾಥ್ , ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ಸರಳ ಸಜ್ಜನಿಕೆಯ ರಾಜಕೀಯಕ್ಕೆ ಗುರುತಾಗಿರುವ, ಧಕ್ಷಿಣ ಭಾರತ ಕಂಡ ಅಪ್ರತಿಮ ದಲಿತ ನಾಯಕ ಮಂಜುನಾಥ್ ಎರಡು ಬಾರಿ ಶಿಕ್ಷಣಮಂತ್ರಿ ಆಗಿದ್ದಲ್ಲದೆ, ಅರಣ್ಯ ಸಚಿವ, ಕಾರ್ಮಿಕ ಮಂತ್ರಿ, ಯೋಜನಾ ಮತ್ತು ಸಾಂಖಿಕ ಹಣಕಾಸುಮಂತ್ರಿ ಹಾಗೂ ವಿಧಾನ ಪರಿಷತ್ ಉಪಸಭಾಪತಿಗಳಾಗಿದ್ದರು.
ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು. ಅಷ್ಟೇ ಅಲ್ಲದೇ ವಿಧಾನ ಪರಿಷತ್ ಸದಸ್ಯರಾಗಿದ್ದ ಮಂಜುನಾಥ್, ಒಂದು ಬಾರಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದರು.
ಬಳಿಕ 2012ರಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ್ದರು. ತದನಂತದ ಆನಾರೋಗ್ಯದ ಕಾರಣದಿಂದ ಅವರು ರಾಜಕೀಯದಿಂದ ದೂರ ಉಳಿದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.