
ಚಿಕ್ಕಮಗಳೂರು(ಅ.11): ಮಾಜಿ ಸಚಿವ ವಿ.ಸೋಮಣ್ಣ ಅವರು ಬಿಜೆಪಿಗೆ ಬಂದು ನಾಲ್ಕು ಬಾರಿ ಸೋತೆ ಎಂದು ಹೇಳುತ್ತಾರೆ. ಆದರೆ ಅವರು ಸೋತಿದ್ದು ಮಾತ್ರ ಹೇಳಬಾರದು, ಮೂರು ಬಾರಿ ಗೆಲ್ಲಿಸಿ, ಮಂತ್ರಿ ಮಾಡಿದ್ದನ್ನೂ ಹೇಳಬೇಕು ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್ ತಿರುಗೇಟು ನೀಡಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸೋಮಣ್ಣ ಎರಡು ಬಾರಿ ಸೋತಾಗಲೂ ಬಿಜೆಪಿ ಅವರನ್ನು ಮಂತ್ರಿ ಮಾಡಿದೆ. ಆಗ ನಾನು ಎಂಎಲ್ಎ. ಸೋಮಣ್ಣ ಅವರಿಗೆ ನಾನೂ ಮತ ಹಾಕಿದ್ದೇನೆ. ಅವರು ಬರೀ ಸೋತಿದ್ದು ಮಾತ್ರ ಹೇಳಬಾರದು, ಮಂತ್ರಿ ಮಾಡಿರುವುದನ್ನೂ ಹೇಳಿಕೊಳ್ಳಬೇಕು ಎಂದು ತಿಳಿಸಿದರು.
ಅಧಿಕಾರ, ವೋಟ್ಬ್ಯಾಂಕ್ ರಾಜಕಾರಣಕ್ಕೆ ಪ್ಯಾಲೆಸ್ತಾನ್ ಪರ ನಿಂತ ಕಾಂಗ್ರೆಸ್; ಡಿಎನ್ ಜೀವರಾಜ್ ಕಿಡಿ
ಹೋದ ಎಲ್ಲಾ ಪಕ್ಷದಲ್ಲೂ ಅಧಿಕಾರ ಮಾಡುತ್ತೇವೆ ಅನ್ನೋ ಮನಸ್ಥಿತಿ ಸರಿಯಲ್ಲ, ಇರುವ ಪಕ್ಷಕ್ಕೆ ನಿಷ್ಠೆ ತೋರಬೇಕು, ಪಕ್ಷಕ್ಕೆ ಸೋಲಾದಾಗ ಜೊತೆಯಲ್ಲಿರಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.