ಸಿದ್ದರಾಮಯ್ಯ ಕಾಂಗ್ರೆಸ್‌ ಅಂದರೆ ತಾನೇ ಅಂತ ತಿಳಿದುಕೊಂಡಂತಿದೆ: ಕಾಂಗ್ರೆಸ್‌ ನಾಯಕ

Kannadaprabha News   | Asianet News
Published : Oct 24, 2020, 11:12 AM ISTUpdated : Oct 24, 2020, 11:14 AM IST
ಸಿದ್ದರಾಮಯ್ಯ ಕಾಂಗ್ರೆಸ್‌ ಅಂದರೆ ತಾನೇ ಅಂತ ತಿಳಿದುಕೊಂಡಂತಿದೆ: ಕಾಂಗ್ರೆಸ್‌ ನಾಯಕ

ಸಾರಾಂಶ

ಈಗ ‘ಮತ್ತೆ ಸಿಎಂ’ ಆಗೋ ವಿಚಾರ ಯಾಕೆ?: ಸಿದ್ದುಗೆ ಎಚ್ಕೆ ಪಾಟೀಲ ಟಾಂಗ್‌| ಸಿದ್ದು ಆಶ್ವಾ​ಸನೆಗಳ ಬಗ್ಗೆ ಮಾಜಿ ಸಚಿವ ಅಸ​ಮಾ​ಧಾ​ನ| ತಾವು ಮತ್ತೆ ಮುಖ್ಯಮಂತ್ರಿಯಾದರೆ 10ಕೆ.ಜಿ. ಉಚಿತ ಅಕ್ಕಿ ನೀಡುವುದಾಗಿ ಹೇಳಿದ್ದ ಸಿದ್ದರಾಮಯ್ಯ| 

ಕೊಪ್ಪಳ(ಅ.24): ಮತ್ತೆ ಮುಖ್ಯಮಂತ್ರಿಯಾದರೆ 10 ಕೆ.ಜಿ. ಅಕ್ಕಿ ನೀಡುತ್ತೇನೆ ಎಂದು ಹೇಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಎಚ್‌.ಕೆ.ಪಾಟೀಲ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ವಿಚಾರ ಈಗ ಯಾಕೆ? ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಶಾಸಕರು, ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದು ಕುಟುಕಿದ್ದಾರೆ.

ಶುಕ್ರವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಅಂದರೆ ತಾನೇ ಅಂತ ತಿಳಿದುಕೊಂಡಂತಿದೆ. ಇದೇ ಕಾರಣಕ್ಕೆ ಮತ್ತೆ ಮುಖ್ಯಮಂತ್ರಿಯಾದರೆ ಉಚಿತ ಅಕ್ಕಿ ನೀಡುವುದಾಗಿ ಹೇಳುತ್ತಿದ್ದಾರೆ.

ದಳದಲ್ಲಿದ್ದಾಗ ನಾನು ಸಿಎಂ ಆಗೋದನ್ನ ತಡೆದವರು ಯಾರು? ಮಾಜಿ ಸಿಎಂ ಹೇಳಿದ ಇತಿಹಾಸ

ಈಗ ಆ ವಿಚಾರಗಳೆಲ್ಲ ಯಾಕೆ? ಚುನಾವಣೆ ಬರಲಿ, ಪಕ್ಷ ಗೆದ್ದ ಬಳಿಕ ಶಾಸಕರು, ಹೈಕಮಾಂಡ್‌ ಸೇರಿಕೊಂಡು ಮುಂದೆ ಯಾರು ಮುಖ್ಯಮಂತ್ರಿ ಆಗಬೇಕೆಂದು ನಿರ್ಧರಿಸುತ್ತಾರೆ ಎಂದು ಹೇಳಿದರು. ಇತ್ತೀಚೆಗಷ್ಟೇ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು ತಾವು ಮತ್ತೆ ಮುಖ್ಯಮಂತ್ರಿಯಾದರೆ 10ಕೆ.ಜಿ. ಉಚಿತ ಅಕ್ಕಿ ನೀಡುವುದಾಗಿ ಹೇಳಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ