ಕಾಂಗ್ರೆಸ್ಸಿಗಾದ ಕಥೆ ಬಿಜೆಪಿಗೂ ಆಗಲಿದೆ: ಎಚ್.ವಿಶ್ವನಾಥ್

Published : Jan 28, 2024, 01:29 PM IST
ಕಾಂಗ್ರೆಸ್ಸಿಗಾದ ಕಥೆ ಬಿಜೆಪಿಗೂ ಆಗಲಿದೆ: ಎಚ್.ವಿಶ್ವನಾಥ್

ಸಾರಾಂಶ

ಕಳೆದ 2019ರಲ್ಲಿ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆಯಲ್ಲಿ ಚುನಾವಣೆ ಎದುರಿಸಿದರು ಕಾಂಗ್ರೆಸ್ ಕಥೆ ಏನಾಯಿತು ಅದೇ ಕಥೆ ಬಿಜೆಪಿಗೆ ಆಗಲಿದೆ ಎಂದ ವಿಶ್ವನಾಥ್ 

ಗುಂಡ್ಲುಪೇಟೆ(ಜ.28):  ಕಾಂತರಾಜು ವರದಿ ಒಂದು ಜಾತಿಗೆ ಸೇರಿದ್ದಲ್ಲ, ಎಲ್ಲಾ ಜಾತಿಯ ಶೋಷಿತರ ಸಮೀಕ್ಷೆಯ ವರದಿಯನ್ನು ಹೊಂದಿದೆ. ರಾಜ್ಯ ಸರ್ಕಾರ ಇದನ್ನು ಯಾಕೆ ಸ್ವೀಕರಿಸುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು. 

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾವು ಕಾಂತರಾಜ ವರದಿಯನ್ನು ಜಾರಿ ಮಾಡಿ ಎಂದು ಕೇಳುತ್ತಿಲ್ಲ, ಮೊದಲು ವರದಿಯನ್ನು ಸ್ವೀಕರಿಸಿ ನಂತರ ಸಾರ್ವಜನಿಕರ ಚರ್ಚೆಗೆ ಬಿಡಿ, ಅದು ಎಲ್ಲಾ ಜಾತಿ ಜನಾಂಗಗಳ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಎಂದರು.

ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕು ನೀಡಿದೆ: ಸಚಿವ ಕೆ.ವೆಂಕಟೇಶ್

ಕಾಂಗ್ರೆಸ್ಸಿಗಾದ ಕಥೆ ಬಿಜೆಪಿಗೆ ಆಗಲಿದೆ: 

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್ ಕಳೆದ 2019ರಲ್ಲಿ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆಯಲ್ಲಿ ಚುನಾವಣೆ ಎದುರಿಸಿದರು ಕಾಂಗ್ರೆಸ್ ಕಥೆ ಏನಾಯಿತು ಅದೇ ಕಥೆ ಬಿಜೆಪಿಗೆ ಆಗಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!