ಬಿಜೆಪಿಯಲ್ಲಿ ಪಕ್ಷ ಕಟ್ಟುವವರೇ ಇಲ್ಲ, ರಾಷ್ಟ್ರೀಯ ಪಕ್ಷಕ್ಕೆ ಈ ಸ್ಥಿತಿ ಬರಬಾರದಿತ್ತು: ಶೆಟ್ಟರ್‌

Published : May 29, 2023, 01:00 AM IST
ಬಿಜೆಪಿಯಲ್ಲಿ ಪಕ್ಷ ಕಟ್ಟುವವರೇ ಇಲ್ಲ, ರಾಷ್ಟ್ರೀಯ ಪಕ್ಷಕ್ಕೆ ಈ ಸ್ಥಿತಿ ಬರಬಾರದಿತ್ತು: ಶೆಟ್ಟರ್‌

ಸಾರಾಂಶ

ನೂತನ ಸಂಸತ್‌ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸಬೇಕಿತ್ತು. ಆದರೆ, ಇದು ನಡೆಯದಿರುವುದು ದುರ್ದೈವದ ಸಂಗತಿ: ಜಗದೀಶ ಶೆಟ್ಟರ್‌ 

ಹುಬ್ಬಳ್ಳಿ(ಮೇ.29): ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಹೋಗಿದ್ದು, ಈಗ ಬಿಜೆಪಿಯಲ್ಲಿ ಪಕ್ಷ ಕಟ್ಟುವವರೇ ಇಲ್ಲದಂತಾಗಿದೆ. ಒಂದು ರಾಷ್ಟ್ರೀಯ ಪಕ್ಷಕ್ಕೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಈ ಪರಿಸ್ಥಿತಿಗೆ ಬರಲು ಕಾರಣರಾದವರು ಈಗ ಎಲ್ಲಿದ್ದಾರೆ?. ನಾನು ಚುನಾವಣೆಯ ವೇಳೆ ಕೇಳಿದ್ದ ಪ್ರಶ್ನೆಗಳಿಗೆ ಈವರೆಗೂ ಉತ್ತರ ನೀಡಿಲ್ಲ. ನನ್ನ ವಿರುದ್ಧ ಏನೆಲ್ಲ ಮಾತನಾಡಿದವರು ಈಗ ತಮ್ಮ ಪಕ್ಷ ಈ ಸ್ಥಿತಿಗೆ ಬಂದಿದ್ದರೂ ಬರದೇ ನಾಪತ್ತೆಯಾಗಿದ್ದಾರೆ. ಬಿಜೆಪಿಗೆ ವಿರೋಧ ಪಕ್ಷದ ನಾಯಕರನ್ನು ಆರಿಸಲೂ ಯಾರಿಲ್ಲದಂತಾಗಿದೆ. ಒಂದು ರಾಷ್ಟ್ರೀಯ ಪಕ್ಷಕ್ಕೆ ಈ ಸ್ಥಿತಿ ಬರಬಾರದಿತ್ತು ಎಂದು ಪರೋಕ್ಷವಾಗಿ ಬಿ.ಎಲ್‌. ಸಂತೋಷ ವಿರುದ್ಧ ಕಿಡಿಕಾರಿದರು.

ರಾಮಲಿಂಗಾರೆಡ್ಡಿಗೆ ಒಂದು ಖಾತೆ ತಗೊಂಡ್ರೆ ಮತ್ತೊಂದು ಫ್ರೀ: ಆಪ್ತನಿಗೆ ಆಫರ್‌ ಕೊಟ್ಟ ಡಿ.ಕೆ.ಶಿವಕುಮಾರ್

ಕಾಂಗ್ರೆಸ್‌ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಸ್ವಲ್ಪ ಸಮಯ ಬೇಕಾಗುತ್ತದೆ, ಇದು ಬಿಜೆಪಿಯವರಿಗೂ ಗೊತ್ತು. ಆದರೆ, ವಿರೋಧ ಪಕ್ಷ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದರು.

ರಾಷ್ಟ್ರಪತಿಗೆ ಆಹ್ವಾನ ನೀಡಬೇಕಿತ್ತು:

ಭಾನುವಾರ ನಡೆದ ನೂತನ ಸಂಸತ್‌ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸಬೇಕಿತ್ತು. ಆದರೆ, ಇದು ನಡೆಯದಿರುವುದು ದುರ್ದೈವದ ಸಂಗತಿ. ಈ ಹಿಂದೆ ನನ್ನ ಅಧಿಕಾರದ ಅವಧಿಯಲ್ಲಿ ಸುವರ್ಣಸೌಧ ಉದ್ಘಾಟನೆ ಮಾಡುವ ಅವಕಾಶ ಬಂದಿತ್ತು. ಆ ವೇಳೆ ನಾನು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಗೆ ಆಹ್ವಾನ ನೀಡಿದ್ದೆ. ರಾಷ್ಟ್ರಪತಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ನೋವಿನ ಸಂಗತಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌