ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಗೆ ತೊಂದರೆ ಆಗದಿರಲಿ, ಈಶ್ವರಪ್ಪ ಪ್ರಾರ್ಥನೆ

Published : Sep 09, 2024, 07:22 AM IST
ಮುಡಾ ಹಗರಣ:  ಸಿದ್ದರಾಮಯ್ಯ ಪತ್ನಿಗೆ ತೊಂದರೆ ಆಗದಿರಲಿ, ಈಶ್ವರಪ್ಪ ಪ್ರಾರ್ಥನೆ

ಸಾರಾಂಶ

ಸಿದ್ದರಾಮಯ್ಯ ಅವರ ಪತ್ನಿ ಯಾವುದೇ ತಂಟೆ-ತಕರಾರುಗಳಿಗೆ ಹೋಗದೆ, ದೇವರು-ದಿಂಡರು ಎಂದು ಮನೆಯಲ್ಲಿರುತ್ತಾರೆ. ಆ ತಾಯಿಗೆ (ಸಿಎಂ ಪತ್ನಿ) ತೊಂದರೆ ಆಗದಂತೆ ನೋಡಿಕೊಳ್ಳಪ್ಪ ಎಂದು ಪ್ರಾರ್ಥಿಸುವೆ. ಕಾರಣ ಸಿದ್ದರಾಮಯ್ಯ ಅವರು ಹೇಳಿದ ಕಡೆ ಪತ್ನಿ ಸಹಿ ಮಾಡಿರುತ್ತಾರೆ: ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ 

ವಿಜಯಪುರ(ಸೆ.09): ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಯಾವುದೇ ತೊಂದರೆ ಆಗದಿರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುವೆ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರ ಪತ್ನಿ ಯಾವುದೇ ತಂಟೆ-ತಕರಾರುಗಳಿಗೆ ಹೋಗದೆ, ದೇವರು-ದಿಂಡರು ಎಂದು ಮನೆಯಲ್ಲಿರುತ್ತಾರೆ. ಆ ತಾಯಿಗೆ (ಸಿಎಂ ಪತ್ನಿ) ತೊಂದರೆ ಆಗದಂತೆ ನೋಡಿಕೊಳ್ಳಪ್ಪ ಎಂದು ಪ್ರಾರ್ಥಿಸುವೆ. ಕಾರಣ ಸಿದ್ದರಾಮಯ್ಯ ಅವರು ಹೇಳಿದ ಕಡೆ ಪತ್ನಿ ಸಹಿ ಮಾಡಿರುತ್ತಾರೆ. ಎಲ್ಲರ ಮನೆಯಲ್ಲೂ ಗಂಡಸರು ಹೇಳಿದಲ್ಲಿ ಹೆಣ್ಣು ಮಕ್ಕಳು ಸಹಿ ಮಾಡುತ್ತಾರೆ. ಅದೇ ರೀತಿ ಸಿಎಂ ಪತ್ನಿಯೂ ಗೊತ್ತಿಲ್ಲದೆ ಸಹಿ ಮಾಡಿರುತ್ತಾರೆ. ಹಾಗಾಗಿ ಮುಡಾ ಪ್ರಕರಣದಲ್ಲಿ ಆ ತಾಯಿಗೆ ಯಾವುದೇ ಅನ್ಯಾಯ ಆಗಬಾರದು ಎಂದರು.

ಬಿಜೆಪಿಯಲ್ಲಿ ಶುದ್ದೀಕರಣ ಆಗುವವರೆಗೂ ನನ್ನ ಹೋರಾಟ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ನನ್ನ ಮೇಲೆ ಆರೋಪ ಬಂದಾಗ ಐದೇ ನಿಮಿಷದಲ್ಲಿ ರಾಜೀನಾಮೆ ಕೊಡುತ್ತೇನೆಂದು ಹೈಕಮಾಂಡ್‌ಗೆ ಫೋನ್ ಕರೆ ಮಾಡಿದ್ದೆ. ಅಷ್ಟರಲ್ಲೇ ನನ್ನ ರಾಜೀನಾಮೆಗೆ ಆಗ್ರಹಿಸಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಮೆರವಣಿಗೆ ಮಾಡಿದರು. ಈಗ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೂ ಸಿಎಂ ರಾಜೀನಾಮೆ ಕೊಟ್ಟಿಲ್ಲ. ಅವರಿಗೊಂದು ಕಾನೂನು?, ನನಗೊಂದು ಕಾನೂನಾ? ಎಂದು ಪ್ರಶ್ನಿಸಿದರು.
ಬಿಜೆಪಿಯವರೇ ಮೊಸ ಮಾಡಿದರು:

ನನ್ನ ಮೇಲೆ ಆರೋಪ ಬಂದಾಗ ನಮ್ಮ ಪಕ್ಷದ ನಾಯಕರೇ ಮೋಸ ಮಾಡಿದರು. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಇನ್ನೊಂದು ವಾರದಲ್ಲಿ ಈಶ್ವರಪ್ಪ ಅವರನ್ನು ಮತ್ತೆ ಮಂತ್ರಿಮಂಡಲಕ್ಕೆ ತೆಗೆದುಕೊಳ್ಳುತ್ತೇವೆ ಎಂದಿದ್ದರು. ಮಂತ್ರಿಮಂಡಲದಲ್ಲಿ 6 ಸ್ಥಾನ ಖಾಲಿ ಇದ್ದರೂ ನನಗೆ ಸಚಿವ ಸ್ಥಾನ ಕೊಡಲಿಲ್ಲ ಎಂದು ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್