ಕೊರೋನಾ ಹೆಸರಲ್ಲಿ ಬಿಎಸ್‌ವೈ ಸರ್ಕಾರ ಹಣ ಲೂಟಿ ಮಾಡುತ್ತಿದೆ: ಎಂ.ಬಿ. ಪಾಟೀಲ್‌

Suvarna News   | Asianet News
Published : Aug 03, 2020, 04:05 PM IST
ಕೊರೋನಾ ಹೆಸರಲ್ಲಿ ಬಿಎಸ್‌ವೈ ಸರ್ಕಾರ ಹಣ ಲೂಟಿ ಮಾಡುತ್ತಿದೆ: ಎಂ.ಬಿ. ಪಾಟೀಲ್‌

ಸಾರಾಂಶ

ದಾಖಲೆಗಳಿಲ್ಲದೇ ಕಾಂಗ್ರೆಸ್ ಆರೋಪ ಮಾಡುತ್ತಿಲ್ಲ| ರಾಜ್ಯ ಸರ್ಕಾರ ಖರೀದಿ ಮಾಡಿರುವ ವೆಂಟಿಲೇಟರ್‌ಗಳು ಸೆಕೆಂಡ್ ಹ್ಯಾಂಡ್ ಅಗಿವೆ| ಸರ್ಕಾರ ಅತೀ ಕಳಪೆ ಗುಣಮಟ್ಟದ ವೆಂಟಿಲೇಟರ್‌ಗಳನ್ನು ಖರೀದಿ ಮಾಡಿದೆ| ಕಳಪೆ ಮಟ್ಟದ ಪಿಪಿಇ ಕಿಟ್ ಖರೀದಿಸಿ ಕೊರೋನಾ ವಾರಿಯರ್ಸ್ ಜೀವದ ಜೊತೆ ಚೆಲ್ಲಾಟವಾಡುತ್ತಿದೆ

ಹಾವೇರಿ(ಆ.03): ಕೊರೋನಾ ಮಹಾಮಾರಿ ರಾಜ್ಯ ಸರ್ಕಾರಕ್ಕೆ ಕಲ್ಪವೃಕ್ಷ, ಕಾಮಧೇನುವಾಗಿ ಮಾರ್ಪಟ್ಟಿದೆ. ಕೊರೋನಾ ಇಡೀ ವಿಶ್ವಕ್ಕೆ ಹೆಮ್ಮಾರಿಯಾಗಿ ಕಾಡುತ್ತಿದೆ. ವೈರಸ್‌ ನಿಯಂತ್ರಿಸಲು ಕೊರೋನಾ ವಾರಿಯರ್ಸ್ ಶ್ರಮಿಸುತ್ತಿದ್ದಾರೆ. ಆದರೆ, ಸರ್ಕಾರಕ್ಕೆ ಕೊರೋನಾ ಹಬ್ಬದ, ಜಾತ್ರೆಯ ವಾತಾವರಣ ಸೃಷ್ಟಿ ಮಾಡಿದೆ. ಸಿಎಂ ಯಡಿಯೂರಪ್ಪ ಅವರಿಂದ ಹಿಡಿದು ಮಂತ್ರಿಗಳು, ಅಧಿಕಾರಿಗಳು ಹಣವನ್ನ ಲೂಟಿ ಮಾಡಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್‌ ಅವರು ಗಂಭೀರವಾಗಿ ಅರೋಪಿಸಿದ್ದಾರೆ. 

ಇಂದು(ಸೋಮವಾರ) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಜನತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಿತ್ತು. ದುರ್ದೈವದ ಸಂಗತಿ ಅಂದ್ರೆ ಸರ್ಕಾರ ಹಾಗೂ ಅಧಿಕಾರಿಗಳಿಗೆ ಇದುವೇ ಬಂಡವಾಳವಾಗಿದೆ. ಕೊರೋನಾ ಸಲುವಾಗಿ ಸರ್ಕಾರ ಒಟ್ಟಾರೆ 4167  ಕೋಟಿ ರೂ. ಗಳನ್ನು ಖರ್ಚು ಮಾಡಿದೆ. ಇದರ ಅರ್ಧದಷ್ಟು ಹಣವನ್ನು ಸಿಎಂ ಅವರಿಂದ ಹಿಡಿದು ಮಂತ್ರಿಗಳು, ಅಧಿಕಾರಿಗಳು ಲೂಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ. 

ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ: ಹಾವೇರಿ ವೈದ್ಯರ ಕಾರ್ಯಕ್ಕೆ ಸಚಿವ ಸುಧಾಕರ್‌ ಶ್ಲಾಘನೆ

ಇದರ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ. ದಾಖಲೆಗಳಿಲ್ಲದೇ ಕಾಂಗ್ರೆಸ್ ಆರೋಪ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಖರೀದಿ ಮಾಡಿರುವ ವೆಂಟಿಲೇಟರ್‌ಗಳು ಸೆಕೆಂಡ್ ಹ್ಯಾಂಡ್ ಅಗಿವೆ. ಅತೀ ಕಳಪೆ ಗುಣಮಟ್ಟದ ವೆಂಟಿಲೇಟರ್‌ಗಳನ್ನು ಖರೀದಿ ಮಾಡಿದೆ. ಕಳಪೆ ಮಟ್ಟದ ಪಿಪಿಇ ಕಿಟ್ ಖರೀದಿಸಿ ಕೊರೋನಾ ವಾರಿಯರ್ಸ್ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎಂದು ಎಂ.ಬಿ. ಪಾಟೀಲ್‌ ಆಗ್ರಹಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌
ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌: ಬಿಜೆಪಿ ನಾಯಕರ ತೀವ್ರ ಆರೋಪ