ರಾಜಕೀಯವಾಗಿ ನನ್ನನ್ನು ಮುಗಿಸಲು ಸಿದ್ದೇಶ್ವರ ಯತ್ನ: ರೇಣುಕಾಚಾರ್ಯ

Published : Oct 19, 2023, 04:05 AM IST
ರಾಜಕೀಯವಾಗಿ ನನ್ನನ್ನು ಮುಗಿಸಲು ಸಿದ್ದೇಶ್ವರ ಯತ್ನ: ರೇಣುಕಾಚಾರ್ಯ

ಸಾರಾಂಶ

ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌, ನಂತರ ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಜಗಳೂರು ಮಾಜಿ ಶಾಸಕ ಟಿ.ಗುರು ಸಿದ್ದನಗೌಡರ ಸೇರಿ ಎಲ್ಲರನ್ನೂ ರಾಜಕೀಯವಾಗಿ ಮುಗಿಸುವ ಕೆಲಸವನ್ನು ಸಿದ್ದೇಶ್ವರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಎಂ.ಪಿ.ರೇಣುಕಾಚಾರ್ಯ 

ದಾವಣಗೆರೆ(ಅ.19):  ಬಿಜೆಪಿಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರಗಿಂತ ನಾನು ಸೀನಿಯರ್‌. ವಯಸ್ಸಿನಲ್ಲಿ ಹಿರಿಯರಾದ ಸಿದ್ದೇಶ್ವರರ ಬಗ್ಗೆ ನನಗೆ ಗೌರವವಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾನೂ ಆಕಾಂಕ್ಷಿ ಅಂದ ದಿನದಿಂದಲೂ ನನ್ನನ್ನು ರಾಜಕೀಯವಾಗಿ ಮುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌, ನಂತರ ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಜಗಳೂರು ಮಾಜಿ ಶಾಸಕ ಟಿ.ಗುರು ಸಿದ್ದನಗೌಡರ ಸೇರಿ ಎಲ್ಲರನ್ನೂ ರಾಜಕೀಯವಾಗಿ ಮುಗಿಸುವ ಕೆಲಸವನ್ನು ಸಿದ್ದೇಶ್ವರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. 

ಬಿಜೆಪಿಗೆ ಸಮರ್ಥ ನಾಯಕತ್ವ ಇಲ್ಲ: ರೇಣು ಮತ್ತೆ ರೆಬೆಲ್‌

ಬಿಜೆಪಿಯಿಂದ ಹೊರ ಹೋಗುವವರು ಹೋಗಲಿ ಎಂಬ ಸಿದ್ದೇಶ್ವರ ಅವರ ಹೇಳಿಕೆ ಸರಿಯಲ್ಲ. ನಾನು ಎಲ್ಲಿಯೂ ಕಾಂಗ್ರೆಸ್‌ಗೆ ಹೋಗುವೆ ಎಂದು ಹೇಳಿಲ್ಲ ಎಂದೂ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್