ಬಿಜೆಪಿ ಸರ್ವಾ​ಧಿಕಾರಿ ಸರ್ಕಾರ: ಮಾಜಿ ಸಚಿವೆ ಉಮಾಶ್ರೀ

Published : Nov 29, 2022, 02:30 PM IST
ಬಿಜೆಪಿ ಸರ್ವಾ​ಧಿಕಾರಿ ಸರ್ಕಾರ: ಮಾಜಿ ಸಚಿವೆ ಉಮಾಶ್ರೀ

ಸಾರಾಂಶ

ದೇಶ ಮತ್ತು ರಾಜ್ಯದಲ್ಲಿ ಜನವಿರೋಧಿ ಸರ್ಕಾರಗಳು ದುರಾಡಳಿತ ನಡೆಸುತ್ತಿವೆ. ಜನರ ಬದುಕನ್ನು ನಿಸ್ತೇಜನ ಮಾಡುತ್ತಿವ: ಉಮಾಶ್ರೀ 

ರಬಕವಿ-ಬನಹಟ್ಟಿ(ನ.29):  ರಾಜಕಾರಣದಲ್ಲಿ ಕಾರ್ಯಕರ್ತರಿಗೆ ಗಂಭೀರತೆ ಬರುವವರೆಗೆ ಕಾಂಗ್ರೆಸ್‌ ಪಕ್ಷ ಸದೃಢವಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಾವು ಮೂಲಭೂತವಾಗಿ ಗಂಭೀರತೆಯಿಂದ ಪಕ್ಷದ ಅಭಿವೃದ್ಧಿಗಾಗಿ ಕರ್ತವ್ಯ ನಿರ್ವಹಿಸಬೇಕು. ಅಂದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

ರಬಕವಿಯ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ಬಿಎಲ್‌ಒ-2 ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಜನವಿರೋಧಿ ಸರ್ಕಾರಗಳು ದುರಾಡಳಿತ ನಡೆಸುತ್ತಿವೆ. ಜನರ ಬದುಕನ್ನು ನಿಸ್ತೇಜನ ಮಾಡುತ್ತಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ಮಿತಿಮೀರಿದ್ದು, ವಿದ್ಯಾವಂತರ ಪರಿಸ್ಥಿತಿ ಕೆಟ್ಟದಾಗಿದೆ. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ವಾ​ಧಿಕಾರಿ ಸರ್ಕಾರ ನಡೆಸುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳು ನಿರ್ನಾಮವಾಗುತ್ತಿವೆ. ಬಿಜೆಪಿ ಪಕ್ಷ ಮತದಾರರ ಪಟ್ಟಿಯಲ್ಲಿ ಬಹಳಷ್ಟು ಹೆಸರುಗಳನ್ನು ತೆಗೆದು ಹಾಕಿದೆ. ಆದ್ದರಿಂದ ಕಾಂಗ್ರೆಸ್‌ ಪಕ್ಷವನ್ನು ಅ​ಕಾರಕ್ಕೆ ತರುವ ನಿಟ್ಟಿನಲ್ಲಿ ಬಿಎಲ್‌ಒಗಳ ಜವಾಬ್ದಾರಿಗಳು ಅತ್ಯಂತ ಮುಖ್ಯವಾಗಿವೆ ಎಂದರು.

ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲು ಆರ್ ಎಸ್‌ಎಸ್‌ ಸಹಮತಿ ಇದೆ : ಜಯ ಮೃತ್ಯುಂಜಯ ಶ್ರೀ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದಯಾನಂದ ಪಾಟೀಲ ಮಾತನಾಡಿ, 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಎಲ್‌ಒ-2 ಕಾರ್ಯಕರ್ತರ ಜವಾಬ್ದಾರಿಗಳು ಅತಿ ಮುಖ್ಯವಾಗಿವೆ. ಕಾರ್ಯಕರ್ತರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ನಡೆಯಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಎಸ್‌.ಜಿ.ನಂಜಯ್ಯನಮಠ, ತೇರದಾಳ ಮತಕ್ಷೇತ್ರದ ಉಸ್ತುವಾರಿ ಬಸವರಾಜ ಶಿಗ್ಗಾಂವಿ ಮಾತನಾಡಿದರು. ಕಾಂಗ್ರೆಸ್‌ ಪಕ್ಷದ ಮುಖಂಡರಾದ ನಜೀರ್‌ ಕಂಗನೊಳ್ಳಿ, ಆನಂದ ಸಿಂಪಿ, ಮಲ್ಲಪ್ಪ ಸಿಂಗಾಡಿ ಇದ್ದರು.

ಲಕ್ಷ್ಮಣ ದೇಸಾರಟ್ಟಿ ಸ್ವಾಗತಿಸಿದರು. ಮಾರುತಿ ಸೋರಗಾವಿ ನಿರೂಪಿಸಿದರು. ಕಿರಣ ಕರಲಟ್ಟಿವಂದಿಸಿದರು. ಕಾರ್ಯಕ್ರಮದಲ್ಲಿ ಸತ್ಯಪ್ಪ ಮಗದುಮ್‌, ಜಿನ್ನಪ್ಪ ಹೊಸೂರ, ವಿದ್ಯಾ ಬಿಳ್ಳೂರ, ಶಾಂತವೀರ ಬೀಳಗಿ, ರಮೇಶ ಸವದಿ, ಶ್ರೀಶೈಲ ಮೇಣಿ, ಪ್ರವೀಣ ಪೂಜಾರಿ, ಬಸವರಾಜ ದ್ಯಾವನ್ನವರ, ರಾಹುಲ ಕಲಾಲ, ಅಶೋಕ ಅಳಗೊಂಡ ಸೇರಿದಂತೆ ತೇರದಾಳ ಮತಕ್ಷೇತ್ರದ ಕಾರ್ಯಕರ್ತರು ಮತ್ತು ಬಿಎಲ್‌ಓ ಗಳು ಇದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ