ಕರ್ನಾಟಕದ ಮಾಜಿ MLCಗೆ ಕೊರೋನಾ ಅಟ್ಯಾಕ್, ಆಸ್ಪತ್ರೆಗೆ ದಾಖಲು

Published : Jul 04, 2020, 04:04 PM ISTUpdated : Jul 04, 2020, 04:30 PM IST
ಕರ್ನಾಟಕದ ಮಾಜಿ MLCಗೆ ಕೊರೋನಾ ಅಟ್ಯಾಕ್, ಆಸ್ಪತ್ರೆಗೆ ದಾಖಲು

ಸಾರಾಂಶ

ಕರ್ನಾಟಕ ಮಾಜಿ ವಿಧಾನಪರಿಷತ್ ಸದಸ್ಯರೊಬ್ಬರಿಗೆ ಕೊರೋನಾ ವೈರಸ್ ಅಟ್ಯಾಕ್‌ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು, (ಜುಲೈ.04): ಮಾಜಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ವಿಷಯವನ್ನು ಸ್ವತಃ ಅವರೇ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ. ಎಲ್ಲರೂ ಮಾಸ್ಕ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಿ ಎನ್ನುವ ಸಲಹೆ ನೀಡಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಕೊರೋನಾ ಭೀತಿ...!

'ಕಳೆದ ನಾಲ್ಕು ದಿನಗಳಿಂದ ಜ್ವರ ಇತ್ತು. ಹಾಗಾಗಿ ಕ್ವಾರಂಟೈನ್​ನಲ್ಲಿ ಇದ್ದೆ. ಗುರುವಾರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ನಿನ್ನೆಯೇ(ಶುಕ್ರವಾರ) ಕೋವಿಡ್​ ಆಸ್ಪತ್ರೆಗೆ ದಾಖಲಾಗಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಆಶೀರ್ವಾದದಿಂದ ಬೇಗ ಗುಣಮುಖನಾಗಿ ಬರುತ್ತೇನೆ' ಎಂದು ಪುಟ್ಟಣ್ಣ ಅವರು ಪೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ್ದು, ಅವರೂ ಸಹ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌