
ಬೆಂಗಳೂರು (ಮಾರ್ಚ್ 1, 2023): ಎಎಪಿ ಸೇರಿ ಛಾಪು ಮೂಡಿಸಿದ್ದ ಸ್ವಯಂ ನಿವೃತ್ತಿ ಪಡೆದ ಐಪಿಎಸ್ ಅಧಿಕಾರಿ, ಎಎಪಿಗೆ ಗುಡ್ಬೈ ಹೇಳಿದ್ದಾರೆ. ಹಾಗೂ, ಭಾಸ್ಕರ್ ರಾವ್ ಬಿಜೆಪಿಗೆ ಸೇರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಎಎಪಿ ತೊರೆದ ಭಾಸ್ಕರ್ ರಾವ್ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿದ್ದಾರೆ. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್ ಕುಮಾರ್ ಕಟೀಲ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಇನ್ನು, ಭಾಸ್ಕರ್ ರಾವ್ ಅವರ ಜೊತೆ ಅವರ ಬೆಂಬಲಿಗರು ಸಹ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆ ಬಳಿಕ ಪ್ರತಿಕ್ರಿಯೆ ನೀಡಿದ ಭಾಸ್ಕರ್ ರಾವ್, ವಿಆರ್ಎಸ್ ತೆಗೆದುಕೊಂಡು ರಾಜಕೀಯ ಬದಲಾವಣೆಗೆ ಹೊರಟಿದ್ದೆ. ಆದರೆ, ಎಎಪಿ ಕರ್ನಾಟಕದಲ್ಲಿ ಬೆಳೆಯುತ್ತಿಲ್ಲ. ಅವರ ಕಾರ್ಯವೈಖರಿ ಶೈಲಿಯಿಂದ ಬೆಳವಣಿಗೆ ಸಾಧ್ಯವಾಗುತ್ತಿಲ್ಲ. ಈಗ ನಾನು ಸನಾತನ ಧರ್ಮದ ಪಕ್ಷ, ರಾಷ್ಟ್ರೀಯತೆಯನ್ನ ಅಳವಾಗಿ ಮೈಗೂಡಿಸಿಕೊಂಡಿರುವ ಪಕ್ಷ ಬಿಜೆಪಿ ಸೇರ್ಪಡೆಯಾಗಿದ್ದೇನೆ.
ಇದನ್ನು ಓದಿ: Bhaskar Rao : ಸಿಎಂ ಕೇಜ್ರಿವಾಲ್ಗೆ ಮತ್ತೊಂದು ಶಾಕ್: ಎಎಪಿ ತೊರೆದು ಬಿಜೆಪಿ ಸೇರಲಿರುವ ಭಾಸ್ಕರ್ ರಾವ್!
ಬಾಲ್ಯದಿಂದಲೂ ಸನಾತನ ಧರ್ಮ, ರಾಷ್ಟ್ರೀಯತೆಗೆ ನಾನು ಬದ್ಧವಾಗಿದ್ದೇನೆ. ಹಾಗಾಗಿ ನಾನು ಬಿಜೆಪಿ (BJP) ಸೇರ್ಪಡೆ ಆಗಿದ್ದೇನೆ ಎಂದು ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಭಾಸ್ಕರ್ ರಾವ್ (Bhaskar Rao) ಹೇಳಿಕೆ ನೀಡಿದ್ದಾರೆ. ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ (AAP) ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ (Delhi Chief Minister) ಅರವಿಂದ್ ಕೇಜ್ರಿವಾಲ್ (Arvind Kejriwal) ಆಗಮಿಸುತ್ತಿದ್ದು, ಇದಕ್ಕೂ ಮೊದಲೇ ಅವರಿಗೆ ಶಾಕ್ ನೀಡಿರುವ ನಿವೃತ್ತ ಐಪಿಎಸ್ ಅಧಿಕಾರಿ (IPS Officer) ಭಾಸ್ಕರ್ ರಾವ್ ಅವರು ಎಎಪಿಗೆ ಗುಡ್ ಬೈ ಹೇಳಿದ್ದಾರೆ.
ಆಮ್ ಆದ್ಮಿ ಪಾರ್ಟಿ ಒಂದು ರೀತಿ MNC ಕಂಪನಿಯ ತರ ಕೆಲಸ ಮಾಡತ್ತೆ. ಅಲ್ಲಿ ರಾಜಕೀಯ ಸಾಧ್ಯವಿಲ್ಲ. ನನ್ನ ಸಮಯ, ವಯಸ್ಸು ಎಲ್ಲಾ ವ್ಯರ್ಥ ಆಗೋದು ಬೇಡ ಎಂದು ಬಿಜೆಪಿ. ಸೇರಿದೆ. ಪಕ್ಷದಿಂದ ನಿರೀಕ್ಷೆ ಏನೂ ಇಲ್ಲ. ಹಿರಿಯರು ಏನು ಹೇಳಿದರೂ ಕೆಲಸ ಮಾಡ್ತೇನೆ ಎಂದು ಬಿಜೆಪಿ ಸೇರಿ ದನಂತರ ಭಾಸ್ಕರ್ ರಾವ್ ಹೇಳಿದ್ದಾರೆ.
ಹಾಗೂ, ಆಮ್ ಆದ್ಮಿ ಬಿಟ್ಟು ಬಿಜೆಪಿ ಸೇರಿದ್ದು ನಿಮ್ಮ ಗೊಂದಲ ಅನಿಸಲ್ವಾ ತಪ್ಪು ಹೆಜ್ಜೆ ಆಗಿಲ್ವಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಭಾಸ್ಕರ್ ರಾವ್, ನಾವು ಪೊಲೀಸ್ ಇಲಾಖೆಯಲ್ಲಿ ತೆಗೆದುಕೊಂಡ ಅನೇಕ ನಿರ್ಣಯಗಳು ತಪ್ಪಾಗಿರಬಹುದು. ಅನೇಕ ಒಳ್ಳೆಯ ಕಾರ್ಯ ಆಗಿರಬಹುದು, ಈಗ ಬಿಜೆಪಿ ಸೇರಿದ್ದೇನೆ. ನಿರೀಕ್ಷೆ ಏನು ಇಲ್ಲ ಎಂದು ಉತ್ತರಿಸಿದ್ದಾರೆ.
ಮಂಗಳವಾರ ಬೆಂಗಳೂರಿನ ಬಿಜೆಪಿ ಕಚೇರಿ (BJP Office) ಜಗನ್ನಾಥ ಭವನದಲ್ಲಿ (Jagannath Bhavan) ಕಂದಾಯ ಸಚಿವ (Revenue Minister) ಆರ್. ಅಶೋಕ್ (R Ashok) ಅವರನ್ನು ಭೇಟಿ ಮಾಡಿದ ಬಾಸ್ಕರ್ ರಾವ್ ಅವರು ನಂತರ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕ ಜೊತೆ ಮಾತುಕತೆ ನಡೆಸಿದರು. ಭಾಸ್ಕರ್ ರಾವ್ ಅವರು ಪೊರಕೆಯ ಚಿಹ್ನೆಯುಳ್ಳ ಎಎಪಿಯಿಂದ ಬಸವನಗುಡಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ಹೊಂದಿದ್ದ ಅವರು, ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಭಾಸ್ಕರ್ ರಾವ್ ಬಿಜೆಪಿಗೆ ಸೇರ್ಪಡೆಯಾಗಿರುವುದು ಅಚ್ಚರಿ ಮೂಡಿಸಿದೆ.
ಇದನ್ನೂ ಓದಿ: ಕೇಜ್ರಿವಾಲ್ ಸರ್ಕಾರದ 2 ವಿಕೆಟ್ ಪತನ, ಜೈಲು ಪಾಲಾಗಿರುವ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ!
ದೆಹಲಿ, ಪಂಜಾಬ್ ಬಳಿಕ ಕರ್ನಾಟಕದಲ್ಲೂ ಅಧಿಕಾರ ಹಿಡಿಯಲು ನಾನಾ ಪ್ರಯತ್ನಗಳನ್ನು ಮಾಡುತ್ತಿರುವ ಎಎಪಿಗೆ ಹಾಗೂ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾಸ್ಕರ್ ರಾವ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವುದು ಹಿನ್ನೆಡೆಯಾಗಿರುವುದಂತೂ ಖಚಿತ.
ದೆಹಲಿಯ ಆಪ್ ಸಚಿವರಾದ ಸತ್ಯೇಂದ್ರ ಜೈನ್ ಹಾಗೂ ಇತ್ತೀಚೆಗೆ ಮನೀಶ್ ಸಿಸೋಡಿಯಾ ಭ್ರಷ್ಟಚಾರಾ ಆರೋಪದ ಮೇಲೆ ಜೈಲಲ್ಲಿರುವುದು ಆಪ್ಗೆ ಒಂದು ರೀತಿಯ ಮುಖಭಂಗವಾಗಿದ್ದರೆ, ಕರ್ನಾಟಕದಲ್ಲಿ ಪಕ್ಷ ಬೆಳೆಸಲು ಹರಸಾಹಸ ಪಡುತ್ತಿರುವ ಹಾಗೂ ರಾಜ್ಯಕ್ಕೆ ಅರವಿಂದ್ ಕೇಜ್ರಿವಾಲ್ ಶೀಘ್ರದಲ್ಲೇ ಆಗಮಿಸುವ ಮುನ್ನವೇ ಭಾಸ್ಕರ್ ರಾವ್ ಬಿಜೆಪಿಗೆ ಸೇರಿರುವುದು ಮತ್ತೊಂದು ಮುಖಭಂಗವಾದಂತಾಗಿದೆ.
ಇದನ್ನೂ ಓದಿ: ಆಪ್ ಸೇನಾನಿಗಳು ಜೈಲಿಗೆ: ಉಡುಗಿದ ಸೇನೆಯ ಮಹಾದಂಡನಾಯಕನ ಜಂಘಾಬಲ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.