Breaking: ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್‌ ಉಚ್ಛಾಟನೆ

Published : May 25, 2024, 07:32 PM ISTUpdated : May 27, 2024, 01:49 PM IST
Breaking: ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್‌ ಉಚ್ಛಾಟನೆ

ಸಾರಾಂಶ

ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.  

ಬೆಂಗಳೂರು (ಮೇ.25): ಬಿಜೆಪಿಯಿಂದ ಮಾಜಿ ಶಾಸಕ ರಘುಪತಿಭಟ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಪದವೀಧರ ಕ್ಷೇತ್ರದಿಂದ ಸ್ಪರ್ಧೆ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಈ ಸಂಗತಿ ಪಕ್ಷಕ್ಕೆ ಮುಜುಗರ ತಂದಿದೆ. ಈ ಬಗ್ಗೆ ಸ್ಪಷ್ಟನೆ ಕೊಡುವಂತೆ ಶಿಸ್ತು ಸಮಿತಿಯಿಂದ ನೋಟೀಸ್ ನೀಡಲಾಗಿತ್ತು. ಇದೀಗ ಶಿಸ್ತು ಸಮಿತಿಯಿಂದ ರಘಪತಿಭಟ್ ಉಚ್ಚಾಟನೆ ಮಾಡಿ ಅದೇಶ ಹೊರಡಿಸಲಾಗಿದೆ. ವಿಧಾನಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಕಾರಣಕ್ಕೆ ಪಕ್ಷದಿಂದ ನಿಮ್ಮನ್ನು ಉಚ್ಛಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತಿ ವಿಧಾನಪರಿಷತ್‌ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ವಾಗಿ ಸ್ಪರ್ಧೆ ಮಾಡುವ ಮೂಲಕ ಪಕ್ಷಕ್ಕೆ ಮುಜುಗರ ತಂದಿರುತ್ತೀರಿ. ಇದು ಪಕ್ಷದ ಶಿಸ್ತಿನ ಉಲ್ಲಂಘನೆ.  ಆದ್ದರಿಂದ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ  ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ