ಮಾಜಿ ಕೇಂದ್ರ ಸಚಿವರಿಗೂ ತಗುಲಿದ ಕೊರೋನಾ: ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

Published : Jul 05, 2020, 04:12 PM ISTUpdated : Jul 05, 2020, 06:51 PM IST
ಮಾಜಿ ಕೇಂದ್ರ ಸಚಿವರಿಗೂ ತಗುಲಿದ ಕೊರೋನಾ: ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಸಾರಾಂಶ

ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

ಮಂಗಳೂರು, (ಜುಲೈ.05): ಮಾಜಿ ಕೇಂದ್ರ ಸಚಿವ  ಬಿ. ಜನಾರ್ದನ ಪೂಜಾರಿ ಅವರಿಗೂ ಕೊರೋನಾ ಸೋಂಕು ತಗುಲಿದೆ. ಈ ಬಗ್ಗೆ ಅವರ ಹಿರಿಯ ಪುತ್ರ ಸಂತೋಷ್ ಜೆ.ಪೂಜಾರಿ ಖಚಿತಪಡಿಸಿದ್ದಾರೆ. ಜನಾರ್ದನ ಪೂಜಾರಿಯವರಿಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಅಲ್ಲದೇ ಅವರ ಪತ್ನಿಗೂ ಸೋಂಕು ತಾಗಿರುವುದು ವರದಿಯಲ್ಲಿ ದೃಢಪಟ್ಟಿದೆ.

"

ಕರ್ನಾಟಕದ ಮಾಜಿ MLCಗೆ ಕೊರೋನಾ ಅಟ್ಯಾಕ್, ಆಸ್ಪತ್ರೆಗೆ ದಾಖಲು 

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಿವಾಸಿಯಾಗಿರುವ ಮಾಜಿ ಸಚಿವರ ಮನೆಯ ಕೆಲಸದಾಕೆಯ ಕಾರಣದಿಂದ ಸೋಂಕು ತಾಗಿದೆ ಎನ್ನಲಾಗಿದೆ. ಸದ್ಯ ಮಾಜಿ ಸಚಿವರು ಮತ್ತು ಅವರ ಪತ್ನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರಿಗೆ ಸೋಂಕು ಸಂಬಂಧಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ.ಅವರು ಆರೋಗ್ಯವಾಗಿದ್ದು, ದಯವಿಟ್ಟು ಯಾರೂ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಅವರು ಸಂಪೂರ್ಣ ಗುಣಮುಖರಾಗಲು ನಾವೆಲ್ಲರೂ ಪ್ರಾರ್ಥಿಸೋಣ ಎಂದು ಪುತ್ರ ಸಂತೋಷ್ ಜೆ. ಪೂಜಾರಿ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ  ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರಿಗೂ ಸಹ ಕೋವಿಡ್ ಸೋಂಕು ದೃಢವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ