
ಬೆಂಗಳೂರು(ಸೆ.11): ಮುಡಾ ಪ್ರಕರಣದಲ್ಲಿ ಸಿಎಂ ಇಕ್ಕಟ್ಟಿಗೆ ಸಿಲುಕಿಸಿ, ರಾಜೀ ನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತಂತ್ರಕ್ಕೆ ಪ್ರತಿತಂತ್ರವಾಗಿ ವಿಪಕ್ಷಗಳ ಅಧಿಕಾರವಧಿಯ ಹಗರಣಗಳ ತನಿಖೆಗೆ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಐವರು ಸಚಿವರ ಸಮಿತಿ ರಚಿಸಲಾಗಿದೆ.
ಈ ಬಗ್ಗೆ ಸಿದ್ದರಾಮಯ್ಯ ಅವರು, ಮಂಗಳವಾರ ಅಧಿಕೃತ ಆದೇಶಿಸಿ ಎರಡು ತಿಂಗಳಲ್ಲಿ ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಂಗಳೂರು ರಿಯಲ್ ಎಸ್ಟೇಟ್ ಮಾಫಿಯಾ: ಬಿಡಿಎ, ಬಿಎಂಆರ್ಡಿಎ ಹೆಸರಿನಲ್ಲಿ 3,000ಕ್ಕೂ ಅನಧಿಕೃತ ಬಡಾವಣೆ!
ಸಮಿತಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷರಾಗಿದ್ದು, ಸಚಿವರಾದ ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಎಸ್.ಲಾಡ್ರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಸಚಿವ ಪರಂ, ಬಿಜೆಪಿ ಅವಧಿಯ ಹಗರಣಗಳು ಹೊರಬರಲಿವೆ. 2 ತಿಂಗಳೊಳಗೆ ವರದಿ ನೀಡಲು ಹೇಳಿದ್ದಾರೆ. 20 25 ಹಗರಣಗಳ ಪಟ್ಟಿ ಮಾಡಿದ್ದೇವೆ. ದ್ವೇಷದ ರಾಜಕಾರಣ ಬೇಡ ಎಂಬುದು ನಮ್ಮ ಉದ್ದೇಶ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.