
ಮದ್ದೂರು(ಮಾ.12): ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಮ್ಮ ಸುಮಲತಾ ಪರ ಜೋಡೆತ್ತುಗಳ ಜೊತೆಗೆ ಇನ್ನೂ ನಾಲ್ವರು ಸ್ಟಾರ್ ನಟರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪುತ್ರ ನಟ ಅಭಿಷೇಕ್ ಅಂಬರೀಶ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಂಬರೀಶ್ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿದ ಮಾತನಾಡಿ, ಚುನಾವಣೆಯಲ್ಲಿ ಅಂಬರೀಶ್ ಅಭಿಮಾನಿಗಳು ಒಗ್ಗಟ್ಟಾಗಿ ಅಮ್ಮ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಮ್ಮನ ಪರ ನಟರಾದ ದರ್ಶನ್ ಹಾಗೂ ಯಶ್ ನನ್ನೊಂದಿಗೆ ಪ್ರಚಾರದಲ್ಲಿ ಪಾಲ್ಗೊಂಡು ಗೆಲುವಿಗೆ ಸಹಕಾರ ನೀಡಿದ್ದರು ಎಂದು ಸ್ಮರಿಸಿದರು.
ನನ್ನ ಗೆಲುವಿಗೆ ಅಂಬರೀಶ್ ಮತಗಳು ಕಾರಣ: ಸಂಸದೆ ಸುಮಲತಾ
ಈ ಚುನಾವಣೆಯಲ್ಲಿ ಜೋಡೆತ್ತುಗಳಾದ ದರ್ಶನ್ ಹಾಗೂ ಯಶ್ ಜೊತೆಗೆ ಕನ್ನಡ ಚಿತ್ರರಂಗದ ಇನ್ನೂ ನಾಲ್ವರು, ಸ್ಟಾರ್ ನಟರುಗಳು ಪ್ರಚಾರ ನಡೆಸಲಿದ್ದಾರೆ ಎಂದು ಅಭಿಷೇಕ್ ಸುಳಿವು ನೀಡಿದರು. ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ನಾಲ್ವರು ನಟರ ಹೆಸರನ್ನು ಬಹಿರಂಗ ಪಡಿಸಲು ನಿರಾಕರಿಸಿದ ಅಭಿಷೇಕ ಮುಂದೆ ಗೊತ್ತಾಗುತ್ತದೆ. ಅಲ್ಲಿಯವರೆಗೆ ತಾಳ್ಮೆಯಿಂದ ಇರಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.