ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎಲ್‌ಕೆಜಿಯಿಂದ ಪಿಯುಸಿವರೆಗೆ ಫ್ರೀ ಶಿಕ್ಷಣ: ಎಚ್‌ಡಿಕೆ ಭರವಸೆ

Published : Feb 01, 2023, 08:51 AM IST
ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎಲ್‌ಕೆಜಿಯಿಂದ ಪಿಯುಸಿವರೆಗೆ ಫ್ರೀ ಶಿಕ್ಷಣ: ಎಚ್‌ಡಿಕೆ ಭರವಸೆ

ಸಾರಾಂಶ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಮಕ್ಕಳಿಗೆ ಎಲ್‌ಕೆಜಿಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ದಾವಣಗೆರೆ (ಫೆ.01): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಮಕ್ಕಳಿಗೆ ಎಲ್‌ಕೆಜಿಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು. ಜೊತೆಗೆ, ಈಗಿರುವ ಕೃಷಿ ವಿಮೆ ಯೋಜನೆಯಲ್ಲಿ ಬದಲಾವಣೆ ಮಾಡಿ ಹೊಸ ರೂಪದಲ್ಲಿ ಜಾರಿಗೊಳಿಸಲಾಗುವುದು. ತೆಲಂಗಾಣ ಮಾದರಿ ‘ರೈತ ಬಂಧು ಯೋಜನೆ’ ತಂದು ಪ್ರತಿ ರೈತರಿಗೆ ಎಕರೆಗೆ 10 ಸಾವಿರ ರು. ನೀಡುವ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಮಂಗಳವಾರ ‘ಪಂಚರತ್ನ ರಥಯಾತ್ರೆ’ ಅಂಗವಾಗಿ ನಡೆದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಅಧಿಕಾರಕ್ಕೆ ಬಂದರೆ ‘ಪಂಚರತ್ನ’ದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುವುದೇ ನನ್ನ ಗುರಿ. ರೈತರ, ಜನ ಸಾಮಾನ್ಯರ, ಬಡವರ ಸಂಕಷ್ಟಪರಿಹರಿಸುವ ಕೆಲಸ ಮಾಡುತ್ತೇನೆ. ಬಡವರಿಗೆ 5 ಲಕ್ಷ ರು. ಮೌಲ್ಯದ ಉಚಿತ ಮನೆ ವಿತರಿಸುತ್ತೇವೆ. ಪ್ರತಿ ಕುಟುಂಬದ ಮಕ್ಕಳಿಗೆ ಯಾವುದೇ ತಾರತಮ್ಯವಿಲ್ಲದೆ ದ್ವಿತೀಯ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡುತ್ತೇವೆ. ತೆಲಂಗಾಣ ಮಾದರಿಯಲ್ಲಿ ರೈತಬಂಧು ಕಾರ್ಯಕ್ರಮ ಜಾರಿಗೊಳಿಸಿ, ಬಿತ್ತನೆ ಕಾಲಕ್ಕೆ ಸರಿಯಾಗಿ 10 ಸಾವಿರ ರು. ನೀಡುತ್ತೇವೆ. 

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವೃದ್ಧರಿಗೆ 5000, ರೈತರಿಗೆ ಎಕರೆಗೆ ವರ್ಷಕ್ಕೊಮ್ಮೆ 10000: ಎಚ್‌ಡಿಕೆ ಘೋಷಣೆ

ಪ್ರತಿ ಎಕರೆಗೆ 10 ಸಾವಿರದಂತೆ 10 ಎಕರೆ ಇರುವ ರೈತರಿಗೆ 1 ಲಕ್ಷ ರು.ವರೆಗೆ ನೀಡಲಾಗುವುದು. ರೈತರಿಗೆ ದಿನದ 24 ಗಂಟೆ ಉಚಿತ ವಿದ್ಯುತ್‌ ನೀಡುತ್ತೇವೆ. ಕೃಷಿ ವಿಮೆ ಜಾರಿಗೊಳಿಸುತ್ತೇವೆ. ಬಿತ್ತನೆ ಬೀಜ, ರಸಗೊಬ್ಬರಕ್ಕಾಗಿ ರೈತರು ಖಾಸಗಿಯವರ ಬಳಿ ಸಾಲ ಮಾಡಬಾರದು ಎಂಬುದೇ ನನ್ನ ಉದ್ದೇಶ ಎಂದು ಹೇಳಿದರು. ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡುತ್ತೇನೆ. ವಿಧವೆಯರ ಮಾಸಾಶನವನ್ನು 800 ರು.ನಿಂದ 2 ಸಾವಿರ ರು.ಗೆ ಹೆಚ್ಚಿಸಲಾಗುವುದು. ವೃದ್ಧರಿಗೆ ನೀಡಲಾಗುವ ಮಾಸಾಶನವನ್ನು ಮಾಸಿಕ 5 ಸಾವಿರ ರು.ಗೆ ಹೆಚ್ಚಿಸಲಾಗುವುದು. ಅಂಗವಿಕಲರಿಗೆ ಮಾಸಿಕ 2,500 ರು. ನೀಡುತ್ತೇನೆ ಎಂದು ಪುನರುಚ್ಚರಿಸಿದರು.

ಬಿಜೆಪಿ, ಕಾಂಗ್ರೆಸ್‌ ಜತೆ ಕೈಜೋಡಿಸಿದರೆ ಪ್ರಗತಿ ಅಸಾಧ್ಯ: ಎಚ್‌.ಡಿ.ಕುಮಾರಸ್ವಾಮಿ

ರೈತರ ಸಾಲ ಮನ್ನಾ ಮಾಡಲೆಂದೇ ಕಾಂಗ್ರೆಸ್‌ ಜೊತೆಗೆ 2018ರಲ್ಲಿ ಮೈತ್ರಿ ಸರ್ಕಾರ ರಚಿಸಿದ್ದೆ. ಸಾಲ ಮನ್ನಾಗೆ ಮಿತ್ರ ಪಕ್ಷ ಸಹಕರಿಸದಿದ್ದರೂ ಹಟದಿಂದ 25 ಸಾವಿರ ಕೋಟಿ ರು. ಸಾಲ ಮನ್ನಾ ಮಾಡುವ ಮೂಲಕ ರೈತರ ಕಣ್ಣೀರು ಒರೆಸುವ ಕೆಲಸ ಮಾಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2 ಲಕ್ಷ ಕುಟುಂಬಗಳಿಗೆ ಸಾಲ ಮನ್ನಾ ಮಾಡಲಿಲ್ಲ. ಇದಕ್ಕಾಗಿ ಮೀಸಲಿಟ್ಟಿದ್ದ ಸುಮಾರು 7 ಸಾವಿರ ಕೋಟಿ ರು.ಗಳನ್ನು ಬಿಜೆಪಿ ಸರ್ಕಾರ ಬೇರೆಡೆ ವರ್ಗಾಯಿಸಿತು ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌