ಹರ್ಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದಲೂ ಉಚಿತ ಗ್ಯಾರಂಟಿ..!

Published : Sep 20, 2024, 08:55 AM IST
ಹರ್ಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದಲೂ ಉಚಿತ ಗ್ಯಾರಂಟಿ..!

ಸಾರಾಂಶ

ಕರ್ನಾಟಕದ 'ಗೃಹಲಕ್ಷ್ಮಿ' ಮಾದರಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2,100 ರು. ಮಾಸಾಶನ, ಬಡವರಿಗೆ 500 ರು. ಸಬ್ಸಿಡಿದರದಲ್ಲಿ ಸಿಲಿಂಡರ್, ಕಾಲೇಜು ಹುಡುಗಿಯರಿಗೆ ಉಚಿತ ಸ್ಕೂಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್- ಇವೇ ಮುಂತಾದವು ಉಚಿತ ಭರವಸೆಗಳು

ಚಂಡೀಗಢ(ಸೆ.20): ಹರ್ಯಾಣದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಬಿಜೆಪಿ ಸತತ 3ನೇ ಬಾರಿ ಶತಾಯ ಗತಾಯ ಅಧಿಕಾರಕ್ಕೆ ಏರಲು ಕಾಂಗ್ರೆಸ್ ರೀತಿಯಲ್ಲೇ ಉಚಿತ ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ. 

ಕರ್ನಾಟಕದ 'ಗೃಹಲಕ್ಷ್ಮಿ' ಮಾದರಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2,100 ರು. ಮಾಸಾಶನ, ಬಡವರಿಗೆ 500 ರು. ಸಬ್ಸಿಡಿದರದಲ್ಲಿ ಸಿಲಿಂಡರ್, ಕಾಲೇಜು ಹುಡುಗಿಯರಿಗೆ ಉಚಿತ ಸ್ಕೂಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್- ಇವೇ ಮುಂತಾದವು ಆ ಭರವಸೆಗಳಲ್ಲಿ ಸೇರಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 'ಸಂಕಲ್ಪ ಪತ್ರ' ಹೆಸರಿನ ಪ್ರಣಾಳಿಕೆಯನ್ನು ಗುರುವಾರ ರೋಪ್ಟಕ್‌ನಲ್ಲಿ ಬಿಡುಗಡೆ ಮಾಡಿದರು.

ಕಾಂಗ್ರೆಸ್‌ ಮಿತ್ರಕೂಟದ ಕಾಶ್ಮೀರ ಪ್ರಣಾಳಿಕೆ ಬಗ್ಗೆ ಪಾಕಿಸ್ತಾನ ಖುಷ್‌..!

ಕಾಂಗ್ರೆಸ್ ಕೂಡ ಬುಧವಾರ ಇಂಥದ್ದೇ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಪ್ರಣಾಳಿಕೆ ಮುಖ್ಯಾಂಶಗಳು: ಹರ್‌ಘರ್‌ ಗೃಹಿಣಿ ಯೋಜನೆ ಅಡಿ ಬಿಪಿಎಲ್ ಕುಟುಂಬಗಳಿಗೆ 500 ರು.ಗೆ ಎಲ್‌ಪಿಜಿ ಸಿಲಿಂಡರ್, 'ಲಾಡೋ ಲಕ್ಷ್ಮಿ' ಯೋಜನೆಯಡಿ ಎಲ್ಲ ಮಹಿಳೆಯರಿಗೆ 2100 ರು. ಮಾಸಾಶನ. ನಿರುದ್ಯೋಗ ನಿವಾರಣೆಗೆ 2 ಲಕ್ಷ ಉದ್ಯೋಗ ಸೃಷ್ಟಿ. ಕನಿಷ್ಠ ಬೆಂಬಲ ಬೆಲೆ ಯೋಜನೆ ಇನ್ನೂ 10 10 ಬೆಳೆಗಳಿಗೆ ವಿಸ್ತರಿಸಿ, ಒಟ್ಟು ಬೆಳೆ ಸಂಖ್ಯೆ 24ಕ್ಕೇರಿಕೆ. ರಾಜ್ಯದ ಗ್ರಾಮೀಣ ಭಾಗದ ಪ್ರತಿ ಕಾಲೇಜು ಹುಡುಗಿಗೆ ಸ್ಕೂಟರ್. ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ 5 ಲಕ್ಷ ಪಕ್ಕಾ ಮನೆಗಳ ನಿರ್ಮಾಣ. ಚಿರಾಯು ಆಯುಷ್ಮಾನ್ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ 10 ಲಕ್ಷ ರು.ವರೆಗೆ ಉಚಿತ ಚಿಕಿತ್ಸೆ. 70 ವರ್ಷ ಮೇಲ್ಪಟ್ಟ ಪ್ರತಿ ಹಿರಿಯ ವ್ಯಕ್ತಿಗಳಿಗೆ 5 ಲಕ್ಷ ರು.ವರೆಗೆ ಉಚಿತ ಚಿಕಿತ್ಸೆ.

ಏನೇನು ಭರವಸೆ? 

• 'ಚಿರಾಯು ಆಯುಷ್ಮಾನ್' ಯೋಜನೆಯಡಿ ಪ್ರತಿ ಕುಟುಂಬಕ್ಕೆ ₹10 ಲಕ್ಷವರೆಗೆ ಉಚಿತ ಚಿಕಿತ್ಸೆ 
• ಹರ್ಯಾಣದ 70 ವರ್ಷ ಮೇಲ್ಪಟ್ಟ ಪ್ರತಿ ಹಿರಿಯ ನಾಗರಿಕರಿಗೆ 5 ಲಕ್ಷ ರು.ವರೆಗೆ ಉಚಿತ ಚಿಕಿತ್ಸೆ 
• 'ಹ‌ರ್ ಘರ್ ಗೃಹಿಣಿ' ಯೋಜನೆಯಡಿ ಬಿಪಿ ಎಲ್ ಕುಟುಂಬಕ್ಕೆ 500ಗೆ ಅಡುಗೆ ಸಿಲಿಂಡರ್ 
• 'ಲಾಡೋ ಲಕ್ಷ್ಮಿ' ಯೋಜನೆಯಡಿ ರಾಜ್ಯದ ಎಲ್ಲ ಮಹಿಳೆಯರಿಗೆ ತಲಾ 2100 ರು. ಮಾಸಾಶನ ನೀಡುವುದಾಗಿ ಭರವಸೆ 
• ಗ್ರಾಮೀಣ ಭಾಗದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಕೂಟರ್ ವಿತರಣೆ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
ಸದನದ ಗೌರವ ಎತ್ತಿಹಿಡಿಯಿರಿ: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಕಿವಿಮಾತು