ದೆಹಲಿಯಲ್ಲಿ ಮಂತ್ರಿಗಳಿಗೆ ಕೊರೋನಾ ಕಾಟ; ಮಹಾಮಾರಿಗೆ ಎಲ್ರೂ ಉಸ್ಸಪ್ಪಾ...ಉಸ್ಸಪ್ಪಾ..!

Published : Sep 18, 2020, 03:09 PM IST
ದೆಹಲಿಯಲ್ಲಿ ಮಂತ್ರಿಗಳಿಗೆ ಕೊರೋನಾ ಕಾಟ; ಮಹಾಮಾರಿಗೆ ಎಲ್ರೂ ಉಸ್ಸಪ್ಪಾ...ಉಸ್ಸಪ್ಪಾ..!

ಸಾರಾಂಶ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೂರನೇ ಬಾರಿ ಆಸ್ಪತ್ರೆ ಸೇರಿದ್ದಾರೆ. ಕೊರೋನಾ ಜೊತೆ ಅಧಿಕ ಮಧುಮೇಹವೂ ಇರುವುದರಿಂದ ಅಮಿತ್‌ ಭಾಯಿ ತೊಂದರೆ ಎದುರಿಸುತ್ತಿದ್ದಾರೆ. ಇನ್ನು ದಿಲ್ಲಿಯಲ್ಲಿ ಕಾರ್ಯಾಲಯದ ಸಿಬ್ಬಂದಿ ಒಬ್ಬರಿಂದ ನಿತಿನ್‌ ಗಡ್ಕರಿಗೂ ಕೊರೋನಾ ಬಂದಿದ್ದು, ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ. 

ನವದೆಹಲಿ (ಸೆ. 18): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಕೇಂದ್ರದ ಮಂತ್ರಿಗಳಿಗೂ ಕೊರೊನಾ ಸೋಂಕು ತಗುಲಿದ್ದು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನು ಕೆಲವರು ಮನೆಯಲ್ಲಿಯೇ ಇದ್ದಾರೆ. 

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೂರನೇ ಬಾರಿ ಆಸ್ಪತ್ರೆ ಸೇರಿದ್ದಾರೆ. ಕೊರೋನಾ ಜೊತೆ ಅಧಿಕ ಮಧುಮೇಹವೂ ಇರುವುದರಿಂದ ಅಮಿತ್‌ ಭಾಯಿ ತೊಂದರೆ ಎದುರಿಸುತ್ತಿದ್ದಾರೆ. ಇನ್ನು ದಿಲ್ಲಿಯಲ್ಲಿ ಕಾರ್ಯಾಲಯದ ಸಿಬ್ಬಂದಿ ಒಬ್ಬರಿಂದ ನಿತಿನ್‌ ಗಡ್ಕರಿಗೂ ಕೊರೋನಾ ಬಂದಿದ್ದು, ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಗುಲಾಂ ನಬಿ ಈಗ ಏಕಾಂಗಿ; ಬರೆಯಲಿದ್ದಾರೆ ಪುಸ್ತಕ

ಗಡ್ಕರಿ ಮಧುಮೇಹ, ರಕ್ತದೊತ್ತಡದ ಸಮಸ್ಯೆಯ ಜೊತೆಗೆ ತೂಕ ಇಳಿಸಿಕೊಳ್ಳುವ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರಿಂದ ವೈದ್ಯರು ಕಡ್ಡಾಯ ವಿಶ್ರಾಂತಿ ಹೇಳಿದ್ದಾರೆ. ಗಡ್ಕರಿ ಅವರಿಗೆ ನಿಶ್ಯಕ್ತಿ ಕಾಡುತ್ತಿದೆ. ಇನ್ನು ಮುಂಬೈಗೆ ಹೋಗಿದ್ದ ಕೇಂದ್ರ ಸಚಿವ ಸುರೇಶ್‌ ಅಂಗಡಿಗೂ ಕೆಮ್ಮು ಕಾಣಿಸಿಕೊಂಡು ಪರೀಕ್ಷೆ ಮಾಡಿಸಿದಾಗ ಕೊರೋನಾ ಪತ್ತೆಯಾಗಿದೆ.

ಸುರೇಶ್‌ ಅಂಗಡಿ ಕೂಡ 7 ದಿನಕ್ಕಾಗಿ ಏಮ್ಸ್‌ಗೆ ದಾಖಲಾಗಿದ್ದು, ಅವರಿಗೆ ಮಧುಮೇಹ, ರಕ್ತದೊತ್ತಡ ಇವ್ಯಾವುವೂ ಇಲ್ಲ. ಮಂತ್ರಿ ಆದರೇನು ಕುಟುಂಬಕ್ಕೆ ಆತಂಕ ಸಹಜ ತಾನೇ? ಅಂಗಡಿ ಪತ್ನಿ, ಇಬ್ಬರು ಪುತ್ರಿಯರು, ಅಳಿಯಂದಿರು ದೆಹಲಿ ತಲುಪಿದ್ದಾರೆ. ಇನ್ನು ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಕೊರೋನಾ ಇದ್ದರೂ ಯಾವುದೇ ಲಕ್ಷಣಗಳು ಇಲ್ಲ. ಹೀಗಾಗಿ ಮನೆಯಲ್ಲೇ ಇದ್ದಾರೆ.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆ ಮುಸ್ಲಿಂ ಮಹಾನಾಯಕನ ವಿರುದ್ಧ ಕಾಂಗ್ರೆಸ್‌ ಶಾಸಕ ರಿಜ್ವಾನ್‌ ಅರ್ಷದ್‌ ವಾಗ್ದಾಳಿ
ಸಂಪುಟದಲ್ಲಿ ಬದಲಾವಣೆ? ಸಚಿವ ಸ್ಥಾನಕ್ಕಾಗಿ 25 ಕೈ ಶಾಸಕರ ದಿಲ್ಲಿ ಚಲೋ