ಅಭಿವೃದ್ಧಿಗೆ ಒತ್ತು ಕೊಟ್ಟು ರಾಜಕೀಯಕ್ಕೆ ಬಂದಿದ್ದೇನೆ: ಕಾಂಗ್ರೆಸ್ ವಿರುದ್ಧ ರೆಡ್ಡಿ ವಾಗ್ದಾಳಿ

Published : Apr 23, 2023, 02:50 PM ISTUpdated : Apr 23, 2023, 02:54 PM IST
ಅಭಿವೃದ್ಧಿಗೆ ಒತ್ತು ಕೊಟ್ಟು ರಾಜಕೀಯಕ್ಕೆ ಬಂದಿದ್ದೇನೆ: ಕಾಂಗ್ರೆಸ್ ವಿರುದ್ಧ ರೆಡ್ಡಿ ವಾಗ್ದಾಳಿ

ಸಾರಾಂಶ

ಕೇವಲ ನನ್ನ ಮೇಲೆ ಪ್ರಕರಣ ದಾಖಲಾಗಿಲ್ಲ, ಅದರಂತೆ ಕಾಂಗ್ರೆಸ್‌ ನಾಯಕರಾದ ಸೋನಿಯಾಗಾಂಧಿ, ರಾಹುಲ್‌ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮೇಲೆಯೂ ಪ್ರಕರಣಗಳಿವೆ ಎಂದು ಕೆಆರ್‌ಪಿಪಿ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಗಂಗಾವತಿ (ಏ.23) : ಕೇವಲ ನನ್ನ ಮೇಲೆ ಪ್ರಕರಣ ದಾಖಲಾಗಿಲ್ಲ, ಅದರಂತೆ ಕಾಂಗ್ರೆಸ್‌ ನಾಯಕರಾದ ಸೋನಿಯಾಗಾಂಧಿ, ರಾಹುಲ್‌ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮೇಲೆಯೂ ಪ್ರಕರಣಗಳಿವೆ ಎಂದು ಕೆಆರ್‌ಪಿಪಿ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ನಗರದ ಇದ್ಗಾ ಮೈದಾನದಲ್ಲಿ ರಂಜಾನ್‌ ನಿಮಿತ್ತ ಸಾಮೂಹಿಕ ಪ್ರಾರ್ಥನೆಯ ನಂತರ ಮಾತನಾಡಿದ ಅವರು, ಕೆಲವರು ನಾನು ಜೈಲಿಗೆ ಹೋಗಿರುವುದನ್ನು ಪದೇ ಪದೇ ಪ್ರಸ್ತಾಪಿಸುತ್ತಾರೆ. ಅವರಿಗೆ ಕಾಂಗ್ರೆಸ್‌ ನಾಯಕರುಗಳು ಜೈಲು, ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ದಾಖಲಾಗಿರುವುದು ಗೊತ್ತಿಲ್ಲವೆ ಎಂದು ಪ್ರಶ್ನಿಸಿದರು.

ಜನಾರ್ದನರೆಡ್ಡಿ ಪತ್ನಿ ₹200 ಕೋಟಿ ಒಡತಿ, ರೆಡ್ಡಿ ಆಸ್ತಿ ₹44 ಕೋಟಿ!

ಒಂದು ಬೆರಳು ಬೇರೆಯವರಿಗೆ ತೋರಿಸುವ ಮೊದಲು ನಾಲ್ಕು ಬೆರಳು ನಮ್ಮ ಕಡೆ ನೋಡುತ್ತವೆ ಎಂದು ಕಾಂಗ್ರೆಸ್‌ನವರು ಅರಿತುಕೊಳ್ಳಬೇಕು ಎಂದರು.

ಜನಾರ್ದನ ರೆಡ್ಡಿ ಜನರ ಕೈಗೆ ಸಿಗಲ್ಲ ಎನ್ನುವ ಆರೋಪಕ್ಕೆ ನಾನು ರಾಜಕೀಯಕ್ಕಿಂತ ಅಭಿವೃದ್ಧಿಗೆ ಒತ್ತು ನೀಡುವುದಕ್ಕಾಗಿ ಗಂಗಾವತಿ ನಗರಕ್ಕೆ ಬಂದಿದ್ದೇನೆ.ಈ ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ. ಈ ಕಾರಣಕ್ಕಾಗಿ ಅಭಿಮಾನಿಗಳು ಸಾಗರೋಪಾದಿಯಲ್ಲಿ ನನ್ನ ಬಳಿ ಬರುತ್ತಿದ್ದಾರೆ.ನನ್ನನ್ನು ಜನರು ಮನೆ ಮಗನಾಗಿ ಸ್ವೀಕರಿಸಿದ್ದು ನನ್ನ ಅದೃಷ್ಟಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದರಾಮಯ್ಯ ಬಳಿಕ ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಖುಷಿ: ಬಿ.ಕೆ.ಹರಿಪ್ರಸಾದ್‌
ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ