
ಕೊಪ್ಪಳ, (ಜುಲೈ.19): ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ಇಂದು.(ಭಾನುವಾರ) ಮಧ್ಯಾಹ್ನ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಸೋಂಕು ತಾಗಿರುವ ತಿಳಿದಿದೆ. ಆದ್ರೆ, ಅವರಿಗೆ ಸೊಂಕು ಹೇಗೆ ತಗುಲಿತು ಮತ್ತು ಅವರ ಪ್ರಾಥಮಿಕ ಸಂರ್ಪಕದಲ್ಲಿ ಯಾರ್ಯಾರು ಇದ್ದರು ಎಂದು ಇನ್ನೂ ತಿಳಿದು ಬಂದಿಲ್ಲ.
ಕೊರೋನಾ ವೈರಸ್ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು
ಕಳೆದ ದಿನಗಳಿಂದ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಪ್ರತಿ ದಿನ ಹಲವಾರು ಕಾರ್ಯಕರ್ತರನ್ನ ಭೇಟಿ ಮಾಡಿದ್ದು, ಅವರಿಗೆಲ್ಲ ಇದೀಗ ಆತಂಕ ಶುರುವಾಗಿದೆ.
ಇನ್ನು ಶಾಸಕ ಪರಣ್ಣ ಮುನವಳ್ಳಿ ಗೆ ಕೋವಿಡ್ ಸೋಂಕು ತಾಗಿರುವ ಕಾರಣ ಶಾಸಕರ ಗನ್ ಮ್ಯಾನ್, ವಾಹನ ಚಾಲಕ ಸೇರಿ ಸಂಪರ್ಕಿತರ ಗಂಟಲು ದ್ರವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ನಿಗದಿತ ಸಮಯದ ವರೆಗೆ ಶಾಸಕರ ನಿವಾಸದ ಕಚೇರಿ ಮತ್ತು ತಾ.ಪಂ.ನಲ್ಲಿರುವ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.