ಬಳ್ಳಾರಿ ಜನರ ಶಾಪದಿಂದ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಜನಾರ್ದನ ರೆಡ್ಡಿ

Published : Oct 03, 2024, 07:42 PM IST
ಬಳ್ಳಾರಿ ಜನರ ಶಾಪದಿಂದ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಜನಾರ್ದನ ರೆಡ್ಡಿ

ಸಾರಾಂಶ

ಸಿದ್ದರಾಮಯ್ಯ ಅವರ ಭಾಷೆಯಲ್ಲಿ ನಾನು ಮಾತನಾಡಲ್ಲ. ಸಿದ್ದರಾಮಯ್ಯ ಅವರು ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರು ಇವತ್ತು ಅವರೇ ಅನುಭವಿಸುತ್ತಿದ್ದಾರೆ. ಬಳ್ಳಾರಿ ಅಭಿವೃದ್ಧಿ ಕನಸು ಕಂಡಿದ್ದೇ, ಸಿದ್ದರಾಮಯ್ಯ ಅದನ್ನು ನುಚ್ಚು ಮೂರು ಮಾಡಿದ್ರು, ನನ್ನನ್ನು ಖಳ ನಾಯಕನಂತೆ ಬಿಂಬಿಸಿದ್ರು. ಬಳ್ಳಾರಿ ಜನರ ಶಾಪದಿಂದ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ವಾಲ್ಮೀಕಿ ಹಗರಣ ನಾಗೇಂದ್ರ ಒಬ್ರೇ ಮಾಡಿಲ್ಲ. ಇದರ ಹಿಂದೆ ಕಾಂಗ್ರೆಸ್ ಪಕ್ಷವೇ ಇದೆ ಎಂದು ದೂರಿದ ಮಾಜಿ ಸಚಿವ ಹಾಗೂ ಹಾಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ 

ಬಳ್ಳಾರಿ(ಅ.03):  ಬಿಜೆಪಿಯ ಗ್ರಾಮ ಪಂಚಾಯತಿ ಸದಸ್ಯರೇ ಇಲ್ಲದೇ ಇರೋ ಬಳ್ಳಾರಿಯಲ್ಲಿ ಕಮಲ ಅರಳಿಸಿದ್ದೇನೆ. ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಬಿಜೆಪಿಗೆ ಬಳ್ಳಾರಿಯಲ್ಲಿ ಮರಳಿ ವೈಭವ ಬರುತ್ತದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

13 ವರ್ಷಗಳ ಬಳಿಕ ಬಳ್ಳಾರಿ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಜನಾರ್ದನ ರೆಡ್ಡಿ ಅವರು, ಸಂಡೂರು ಉಪಚುನಾವಣೆ ಉಸ್ತುವಾರಿ ಮುಖ್ಯವಲ್ಲ ಪಕ್ಷ ಗೆಲ್ಲಿಸೋದು ಅಷ್ಟೇ ಮುಖ್ಯ ಎಂದು ತಿಳಿಸಿದ್ದಾರೆ. 
ಜನಾರ್ದನ ರೆಡ್ಡಿ ಸ್ವಾಗತಕ್ಕೆ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಬಾರದೆ‌ ಇರೋ ವಿಚಾರ ಬಗ್ಗೆ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಸಹೋದರ, ಸ್ನೇಹಿತ ವಿಷಯ ಬರಲ್ಲ. ವೈಯಕ್ತಿಕ ಸಂಬಂಧಿಸಿದ ಮುಖ್ಯ ಅಲ್ಲ. ಪಕ್ಷ ಮುಖ್ಯ ಎಂದು ಹೇಳಿದ್ದಾರೆ. 

ಭ್ರಷ್ಟ ಸಿಎಂ ಪ್ರಭಾವಕ್ಕೆ ಒಳಗಾಗಿ ಸೈಟು ಖಾತೆ ರದ್ದು: ಸಿದ್ದು ವಿರುದ್ಧ ಸಿಡಿದೆದ್ದ ವಿಜಯೇಂದ್ರ

ಸಿದ್ದರಾಮಯ್ಯ ಅವರ ಭಾಷೆಯಲ್ಲಿ ನಾನು ಮಾತನಾಡಲ್ಲ. ಸಿದ್ದರಾಮಯ್ಯ ಅವರು ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರು ಇವತ್ತು ಅವರೇ ಅನುಭವಿಸುತ್ತಿದ್ದಾರೆ. ಬಳ್ಳಾರಿ ಅಭಿವೃದ್ಧಿ ಕನಸು ಕಂಡಿದ್ದೇ, ಸಿದ್ದರಾಮಯ್ಯ ಅದನ್ನು ನುಚ್ಚು ಮೂರು ಮಾಡಿದ್ರು, ನನ್ನನ್ನು ಖಳ ನಾಯಕನಂತೆ ಬಿಂಬಿಸಿದ್ರು. ಬಳ್ಳಾರಿ ಜನರ ಶಾಪದಿಂದ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ವಾಲ್ಮೀಕಿ ಹಗರಣ ನಾಗೇಂದ್ರ ಒಬ್ರೇ ಮಾಡಿಲ್ಲ. ಇದರ ಹಿಂದೆ ಕಾಂಗ್ರೆಸ್ ಪಕ್ಷವೇ ಇದೆ ಎಂದು ದೂರಿದ್ದಾರೆ. 

ಮುಡಾ ಸೈಟ್ ವಿಚಾರದಲ್ಲಿ ಯಾವ ತಪ್ಪು ಮಾಡಿಲ್ಲ ಅಂದ್ರು. ಜನಾರ್ದನ ರೆಡ್ಡಿ ಲಕ್ಷ ಕೋಟಿ ಅವ್ಯವಹಾರ ಮಾಡಿದ್ದಾರೆ ಅಂದ್ರು. ಆದ್ರೇ ನಾವು ಒಂದು ರೂಪಾಯಿ ಅವ್ಯವಹಾರ ಮಾಡಿಲ್ಲ. ನಮ್ಮ ಮೇಲೆ ಅರೋಪ ಮಾಡಿದ್ರು ಇವತ್ತು ಅವರೇ ಸಿಲುಕಿಕೊಂಡಿದ್ದಾರೆ. ಬೇನಾಮಿಯಾಗಿ ಐದು ಸಾವಿರ ಕೋಟಿ ಭೂಮಿ‌ ಕೊಳ್ಳೆ ಹೊಡೆದಿದ್ದಾರೆ. ಜನಾರ್ದನ ರೆಡ್ಡಿ ಆರೋಪ ಪ್ರೂ ಮಾಡಲು ಸಾಧ್ಯವಾಗಿಲ್ಲ. ತನಿಖೆಯಾದ್ರೇ ಸಿದ್ದರಾಮಯ್ಯ ತಪ್ಪು ಬಯಲಿಗೆ ಬರುತ್ತದೆ ಎಂದು ತಿಳಿಸಿದ್ದಾರೆ. 

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರ ಒಂದು ಫೋನ್ ಕಾಲ್‌ಗೆ ಯಡಿಯೂರಪ್ಪ ರಾಜೀನಾಮೆ ನೀಡಿದ್ರು. ಮಾನ ಮರ್ಯಾದೆ ನೀಚ ರಾಜಕಾರಣ ಎನ್ನುವ ಸಿದ್ದರಾಮಯ್ಯ ಅವೆಲ್ಲವನ್ನೂ ಮೀರಿದ್ದಾರೆ ಎಂದು ಟೀಕಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ