
ಬೆಂಗಳೂರು(ಜೂ.14): ಸ್ಯಾಂಡಲ್ವುಡ್ನ ಖ್ಯಾತ ನಟ ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿ ಗೀತಾ ಅವರೊಂದಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಭೇಟಿ ಮಾಡಿದ ನಟ ಶಿವರಾಜ್ಕುಮಾರ್ ದಂಪತಿ ಸಿಎಂಗೆ ಅಭಿನಂದನೆ ತಿಳಿಸಿದರು. ಜೊತೆಗೆ ತಮ್ಮ ಸಚಿವ ಸಂಪುಟದಲ್ಲಿ ಗೀತಾ ಶಿವರಾಜ್ಕುಮಾರ್ ಅವರ ಸಹೋದರ ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೂ ಧನ್ಯವಾದ ಹೇಳಿದರು ಎಂದು ತಿಳಿದು ಬಂದಿದೆ.
ನಾನೇಕೆ ಮುಖ್ಯಮಂತ್ರಿ ಆಗಬಾರದು?: ಹೊಸ ಚರ್ಚೆಗೆ ನಾಂದಿ ಹಾಡಿದ ಪರಮೇಶ್ವರ್..!
ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಅವರು ಕೂಡ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ವಿವಿಧೆಡೆ ಪ್ರಚಾರ ನಡೆಸಿದ್ದಕ್ಕಾಗಿ ನಟ ಶಿವರಾಜ್ಕುಮಾರ್ ಅವರನ್ನು ಅಭಿನಂಧಿಸಿದ್ದಾರೆ. ಈ ವೇಳೆ ಗೀತಾ ಅವರ ಸಹೋದರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಉಪಸ್ಥಿತರಿದ್ದರು.
ಲೋಕಸಭೆಗೆ ಗೀತಾ?:
ಈ ಮಧ್ಯೆ, ಮೇಲ್ನೋಟಕ್ಕೆ ಇದೊಂದು ಸ್ನೇಹ ಹಾಗೂ ಪರಸ್ಪರ ಅಭಿನಂದನಾಪೂರ್ವಕ ಭೇಟಿ ಎನ್ನಿಸಿದರೂ ಕೆಲ ರಾಜಕೀಯ ವಿಚಾರಗಳ ಚರ್ಚೆಗಳೂ ನಡೆದಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರಿಯಾದ ಗೀತಾ ಅವರು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. 2014ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದ ಅವರು ಮತ್ತೊಮ್ಮೆ ಅದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.