'ಪ್ರಧಾನಿ ನರೇಂದ್ರ ಮೋದಿ ಹೆದರುವುದು ರಾಹುಲ್ ಗಾಂಧಿಗೆ ಮಾತ್ರ'

Published : Aug 23, 2020, 10:35 PM IST
'ಪ್ರಧಾನಿ ನರೇಂದ್ರ ಮೋದಿ ಹೆದರುವುದು ರಾಹುಲ್ ಗಾಂಧಿಗೆ ಮಾತ್ರ'

ಸಾರಾಂಶ

ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕೂಗು/ ರಾಹುಲ್ ಗಾಂಧಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಿ/ ಪ್ರಧಾನಿ ಮೋದಿ ಹೆದರುವುದು ರಾಹುಲ್ ಗೆ ಮಾತ್ರ/ ಮುಂದಿನ ಲೋಕ ಸಮರಕ್ಕೆ ಈಗಿನಿಂಲೇ ಸಿದ್ಧತೆ

ಗುವಾಹಟಿ( ಆ. 23) ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿಬರುತ್ತಲೇ ಇದೆ. ಒಂದು ಕಡೆ ಹೊಸ ಅಧ್ಯಕ್ಷರ ಆಯ್ಕೆಗೆ ಒಲವು ತೋರಿರುವ ಸೋನಿಯಾ ಗಾಂಧಿ ಸಭೆಯನ್ನು ಕರೆದಿದ್ದಾರೆ.

ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಕರ್ನಾಟಕ ಕಾಂಗ್ರೆಸ್ ಗಾಂಧಿ ಕುಟುಂಬಕ್ಕೆ ಜೈ ಎಂದಿದೆ. ಆದರೆ ಗುಗವಾಟಿಯ ನಾಯಕರೊಬ್ಬರು ಇವರೆಲ್ಲರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿಯೇ ಸೂಕ್ತ ಎಂದು ಹೇಳಿದ್ದು ಅದಕ್ಕೆ ಕಾರಣವನ್ನು ನೀಡಿದ್ದಾರೆ.

ರಾಹುಲ್​ ಗಾಂಧಿಯವರನ್ನೇ ಮತ್ತೆ ಕಾಂಗ್ರೆಸ್​ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಕೂಗಿಗೆ ಅಸ್ಸಾಂ ಕಾಂಗ್ರೆಸ್​ ಅಧ್ಯಕ್ಷ ರಿಪುನ್​ ಬೋರಾ ಜೈ ಎಂದಿದ್ದಾರೆ.  ರಾಹುಲ್​ ಗಾಂಧಿಯವರನ್ನೇ ಕಾಂಗ್ರೆಸ್​ ಅಧ್ಯಕ್ಷನನ್ನಾಗಿ ನೇಮಕ ಮಾಡಬೇಕು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಹುಲ್​ ಗಾಂಧಿ ಅವರೊಬ್ಬರಿಗೇ ಮಾತ್ರ ಭಯ ಪಡುತ್ತಾರೆ! ಎಂದು ಹೇಳಿದ್ದಾರೆ.

ಗಾಂಧಿಗಳ ಕೊಂಡಾಡಿದ ಪಂಜಾಬ್ ಸಿಎಂ, ರಾಜೀವ್-ಇಂದಿರಾ ದೇಶಕ್ಕಾಗಿ ಪ್ರಾಣ ಕೊಟ್ಟರು!

ರಾಹುಲ್ ಗೆ ಭಯಪಡುವ ಕಾರಣಕ್ಕೆ ಅವರ ಮೇಲೆ ಇಲ್ಲದ ಕೇಸುಗಳನ್ನು ದಾಖಲಿಸಲಾಗುತ್ತಿದೆ. ಆರ್ ಎಸ್‌ಎಸ್ ಮತ್ತು ನರೇಂದ್ರ ಮೋದಿಗೆ ರಾಹುಲ್ ಸವಾಲು ಹಾಕಿಕೊಂಡೇ ಬಂದಿದ್ದಾರೆ ಎಂದು ಹೇಳುತ್ತ ಇವರು ಗಾಂಧಿ ಫ್ಯಾಮಿಲಿಗೆ ವಿಧೇಯತೆ ತೋರಿಸಿದ್ದಾರೆ.

ಸೋನಿಯಾ ಗಾಂಧಿ ಅವರಿಗೆ ರಾಹುಲ್ ಅವರನ್ನೇ ಅಧ್ಯಕ್ಷರನ್ನಾಗಿಸಿ ಎಂದು ಪತ್ರ ಬರೆದಿದ್ದೇನೆ. ಐದು ಅಂಶಗಳ ಕಾರ್ಯಕ್ರಮ ಇಟ್ಟುಕೊಂಡು ಪಕ್ಷವನ್ನು ಬಲಿಷ್ಠಮಾಡಬೇಕಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಮುಖಂಡ ಹೇಳಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾದ ನಂತರ ರಾಹುಲ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಿದ್ದರು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?