ಜೆಡಿಎಸ್‌ಗೆ ಪೂರ್ಣ ಅಧಿಕಾರ ಕೊಡಿ, ರಾಮರಾಜ್ಯ ನಿರ್ಮಿಸುವೆ: ಎಚ್‌ಡಿಕೆ

Published : Jan 11, 2021, 07:47 AM IST
ಜೆಡಿಎಸ್‌ಗೆ ಪೂರ್ಣ ಅಧಿಕಾರ ಕೊಡಿ, ರಾಮರಾಜ್ಯ ನಿರ್ಮಿಸುವೆ: ಎಚ್‌ಡಿಕೆ

ಸಾರಾಂಶ

ಬಿಜೆಪಿಯವರಂತೆ ಮಾತಿನಲ್ಲಷ್ಟೇ ನನ್ನ ರಾಮರಾಜ್ಯ ಇರಲ್ಲ| ಜೆಡಿಎಸ್‌ಗೆ ಪೂರ್ಣ ಅಧಿಕಾರ ಕೊಡಿ, ರಾಮರಾಜ್ಯ ನಿರ್ಮಿಸುವೆ: ಎಚ್‌ಡಿಕೆ

ಶ್ರೀರಂಗಪಟ್ಟಣ(ಜ.11): ನನ್ನ ಮೇಲೆ ನಂಬಿಕೆ ಇಟ್ಟು ಒಮ್ಮೆ ಜೆಡಿಎಸ್‌ಗೆ ಪೂರ್ಣ ಬಹುಮತ ಕೊಡಿ. ಕರ್ನಾಟಕ ರಾಜ್ಯವನ್ನು ನಿಜವಾದ ರಾಮರಾಜ್ಯವನ್ನಾಗಿ ಮಾಡಿ ತೋರಿಸುವೆ ಎಂದು ಮಾಜಿ ಮುಖ್ಯ​ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಭಾನು​ವಾರ ಕಾರ್ಯ​ಕ್ರ​ಮ​ವೊಂದ​ರಲ್ಲಿ ಮಾತ​ನಾ​ಡಿದ ಅವರು, ಮುಂದಿನ ಚುನಾವಣೆಯಲ್ಲಿ ಜಾತಿ, ಹಣದ ವ್ಯಾಮೋಹ ಬಿಟ್ಟು ಒಂದು ಬಾರಿ ಜೆಡಿಎಸ್‌ ಪಕ್ಷವನ್ನು ಗೆಲ್ಲಿಸಿ. ಮುಂದೆ ನನ್ನ ಯೋಜನೆಗೆ ಪಂಚರತ್ನ ಎಂದು ಹೆಸರಿಡುತ್ತೇನೆ. ಪಂಚರತ್ನ ಕಾರ್ಯಕ್ರಮ ಬೇಕೆಂದರೆ ಜೆಡಿಎಸ್‌ ಬೆಂಬಲಿಸಿ. ಅಭ್ಯರ್ಥಿ ಯಾರೇ ಇರಲಿ, ಎಲ್ಲಾ ಕ್ಷೇತ್ರದಲ್ಲೂ ನಾನೇ ಅಭ್ಯರ್ಥಿ ಎಂದು ಮತ ಕೊಡಿ. ನನ್ನ ಕನಸಿನ ಯೋಜನೆಗಳನ್ನು ಜಾರಿಗೆ ತಂದು ರಾಜ್ಯವನ್ನು ದೇಶದಲ್ಲಿಯೇ ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ. ಬಿಜೆಪಿಯವರಂತೆ ಮಾತಿನಲ್ಲಷ್ಟೇ ನನ್ನ ರಾಮರಾಜ್ಯ ಇರುವುದಿಲ್ಲ. ನಿಜವಾದ ಅರ್ಥದಲ್ಲಿ ರಾಮರಾಜ್ಯ ಹೇಗಿರಬೇಕೆಂದು ನಿರ್ಮಾಣ ಮಾಡಿ ತೋರಿಸುತ್ತೇನೆ ಎಂದು ಹೇಳಿದರು. ಈ ಮೂಲಕ ಬಿಜೆಪಿ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಅವರು ಯಾರೋ ನನಗೆ ಗೊತ್ತಿಲ್ಲ!

ಶ್ರೀರಂಗಪಟ್ಟಣ: ನೇರಳೇಕೆರೆಯಲ್ಲಿ ಸುದ್ದಿಗಾರರು ರಾಧಿಕಾ ಕುಮಾರಸ್ವಾಮಿ ಹಾಗೂ ಯುವರಾಜ್‌ ನಡುವಿನ ಹಣಕಾಸು ವ್ಯವಹಾರ, ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಬಗ್ಗೆ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ. ನನಗೆ ದುಡ್ಡು ಹೊಡೆಯೋ ಆಸಕ್ತಿ ಇಲ್ಲ. ನನಗಿರೋದು ಹೆಸರು ಮಾಡೋ ಆಸಕ್ತಿ ಅಷ್ಟೇ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ