ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ಕೈಗೊಳ್ಳಿ: ಸಿದ್ದರಾಮಯ್ಯಗೆ ಶಾಸಕ ಯತ್ನಾಳ್‌ ಬೆಂಬಲ!

Published : Oct 04, 2023, 07:37 PM IST
ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ಕೈಗೊಳ್ಳಿ: ಸಿದ್ದರಾಮಯ್ಯಗೆ ಶಾಸಕ ಯತ್ನಾಳ್‌ ಬೆಂಬಲ!

ಸಾರಾಂಶ

ಜಾತಿ ಜನಾಂಗದ ಮೇಲೆ ಯಾರೂ ಮುಖ್ಯಮಂತ್ರಿ ಆಗಲ್ಲ. ಲಿಂಗಾಯತ- ಕುರುಬ ಇದು ಮೂರ್ಖತನದ ಹೇಳಿಕೆ. ಯಾವ ಡಿಕೆಶಿಗೂ, ಶಾಮನೂರುಗೂ ಅಂಜಬೇಡಿ, ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ಕೈಗೊಳ್ಳಿ ಎಂದು ಹೇಳಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಿಎಂ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದಂತಿದೆ. 

ಯಾದಗಿರಿ (ಅ.04): ಜಾತಿ ಜನಾಂಗದ ಮೇಲೆ ಯಾರೂ ಮುಖ್ಯಮಂತ್ರಿ ಆಗಲ್ಲ. ಲಿಂಗಾಯತ- ಕುರುಬ ಇದು ಮೂರ್ಖತನದ ಹೇಳಿಕೆ. ಯಾವ ಡಿಕೆಶಿಗೂ, ಶಾಮನೂರುಗೂ ಅಂಜಬೇಡಿ, ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ಕೈಗೊಳ್ಳಿ ಎಂದು ಹೇಳಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಿಎಂ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದಂತಿದೆ. 

ಹಿಂದೂ ಮಹಾ ಗಣಪತಿ ವಿಸರ್ಜನೆ ಅಂಗವಾಗಿ ಮಂಗಳವಾರ ಸಂಜೆ ಜಿಲ್ಲೆಯ ಶಹಾಪುರಕ್ಕೆ ಆಗಮಿಸಿದ್ದ ಯತ್ನಾಳ್‌, ಶಾಮನೂರು ಶಿವಶಂಕರಪ್ಪ ಲಿಂಗಾಯತ ಸಿಎಂ ಹೇಳಿಕೆ ವಿಚಾರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನಾವು ಜಾತಿ ಮೇಲೆ ಮಾತನಾಡುವುದಿಲ್ಲ, ಜಾತಿ ಜನಾಂಗದ ಮೇಲೆ ಯಾರೂ ಮುಖ್ಯಮಂತ್ರಿ ಆಗುವುದಿಲ್ಲ, ಯಾರು ಸಮರ್ಥ ಆಡಳಿತಕೊಡುತ್ತಾರೆಯೋ ಅವರೇ ಮುಖ್ಯಮಂತ್ರಿ ಆಗಬೇಕು. 

ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರ ವಹಿಸಿಕೊಂಡಂತಾಗಿದೆ: ಶಾಸಕ ಬಸನಗೌಡ ಯತ್ನಾಳ್ ಆರೋಪ

ರಾಜ್ಯದ ಜನ 135 ಶಾಸಕರ ಬೆಂಬಲವನ್ನು ಸಿದ್ದರಾಮಯ್ಯನವರಿಗೆ ನೀಡಿ, ಆಶೀರ್ವಾದ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯನವರಿಗೆ ಆಡಳಿತ ಮಾಡಲು ಕಾಂಗ್ರೆಸ್ ನವರೇ ಬಿಡುತ್ತಿಲ್ಲ ಎಂದ ಅವರು, ಒಬ್ಬೊಬ್ಬ ಶಾಸಕರು ತಮ್ಮ ಅಸಮಾಧಾನವನ್ನು ಸ್ಫೋಟ ಮಾಡ್ತಿದ್ದಾರೆ, ಈಗಾಗಿ ಆಡಳಿತ ಮಾಡಲು ಅವರಿಗೆ ಆಗುತ್ತಿಲ್ಲ ಎಂದ ಅವರು, ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ತೆಗೆದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.

ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂಗೆ ಕಾವೇರಿ ಕೂಗು ಕೇಳಲ್ವೆ?: ತಮಿಳುನಾಡಿಗೆ ನೀರು ಹರಿಸಿ ಕರ್ನಾಟಕದ ರೈತರ ಬಗ್ಗೆ ಕಾಳಜಿ ಮಾಡದೆ ಕೃಷ್ಣೆಗೆ ಬಾಗಿನ ಅರ್ಪಿಸಲು ಬಂದಿರುವ ತಮ್ಮನ್ನು ನಾಡಿನ ಜನತೆ ಕ್ಷಮಿಸುವರೇ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಅವರನ್ನು ಪ್ರಶ್ನಿಸಿದ್ದಾರೆ. 

ದೇಶದಲ್ಲಿ ಏನೇ ಕೆಟ್ಟದಾದರೂ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ: ಸಚಿವ ಸಂತೋಷ್ ಲಾಡ್‌

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ‘ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿಗಳಿಗೆ ಕಾವೇರಿಯ ಕೂಗು ಕೇಳಲಿಲ್ಲವೇ? ಎಂದು ಟೀಕಿಸಿದ್ದಾರೆ. ಸಚಿವರಿಗೆ ಹೊಸದಾಗಿ ಕಾರು ಖರೀದಿಸಲು ಸರ್ಕಾರ ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ‘ರಾಜ್ಯದಲ್ಲಿ ಬರದ ಛಾಯೆ ಇರಬೇಕಾದರೆ ಈ ರೀತಿಯಾದ ದುಂದು ವೆಚ್ಚ ಮಾಡುವ ಅವಶ್ಯಕತೆ ಇದೆಯಾ? ಆರ್ಥಿಕ ಶಿಸ್ತು, ಆರ್ಥಿಕ ನೀತಿಗಳ ಹರಿಕಾರ, 13 ಬಜೆಟ್‌ ಮಂಡಿಸಿದ ಮೊಟ್ಟಮೊದಲ ಮುಖ್ಯಮಂತ್ರಿಗಳು ಎಂದೆಲ್ಲ ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು 4-ಜಿ ವಿನಾಯಿತಿ ಪಡೆದುಕೊಂಡು ತೆರಿಗೆದಾರರ ಹಣದಲ್ಲಿ ಕಾರು ಖರೀದಿ ಮಾಡುತ್ತಿರುವುದು ಖಂಡನೀಯ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌