
ಬೆಂಗಳೂರು : ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಡಿ. 9 ಮತ್ತು 11ರಂದು ನಡೆಯಲಿದ್ದು, ಈ ದಿನಗಳಂದು ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕೇರಳ ಮತದಾರರಿಗೆ ವೇತನ ಸಹಿತ ರಜೆ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖಾಸಗಿ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.
ಕೇರಳ ರಾಜ್ಯದ ನಿವಾಸಿಗಳು ರಾಜ್ಯದಲ್ಲಿ ಸಾಕಷ್ಟು ಮಂದಿಯಿದ್ದಾರೆ. ಅವರಲ್ಲಿ ಬಹುತೇಕರು ಖಾಸಗಿ ಸಂಸ್ಥೆ, ಹೋಟೆಲ್ ಸೇರಿದಂತೆ ಇನ್ನಿತರ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಬೇಕಿದ್ದು, ಅದಕ್ಕಾಗಿ ಕೇರಳ ಮತದಾರರಿಗೆ ಮತದಾನದ ದಿನದಂದು ವೇತನ ಸಹಿತ ರಜೆ ನೀಡಲು ಖಾಸಗಿ ಸಂಸ್ಥೆಗಳು ಮುಂದಾಗಬೇಕು ಎಂದು ಕೋರಿದ್ದಾರೆ.
ಈ ಹಿಂದೆ ಬಿಹಾರ ವಿಧಾನಸಭಾ ಚುನಾವಣೆ ವೇಳೆಯು ಡಿ.ಕೆ.ಶಿವಕುಮಾರ್ ಇದೇ ರೀತಿಯ ಮನವಿ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.