
ನವದೆಹಲಿ ಮೇ.25: ದೇವರೇ ತನ್ನನ್ನು 2047ರವರೆಗೆ ಭಾರತ ಮತ್ತು ಭಾರತೀಯರ ಸೇವೆ ಮಾಡುವಂತೆ ದೀಕ್ಷೆ ನೀಡಿ ಕಳುಹಿಸಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ತಾವು ಬದುಕಿರುವವರೆಗೂ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವ ಕುರಿತು ಸುಳಿವನ್ನು ನೀಡಿದ್ದಾರೆ.
ಈ ಕುರಿತು ಇಂಡಿಯಾ ಟಿವಿಯ ಸಲಾಂ ಟಿವಿ ಶೋನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ‘ದೇವರೇ ನನ್ನನ್ನು ವಿಶೇಷ ಕಾರ್ಯಕ್ಕಾಗಿ ಇಲ್ಲಿಗೆ ಕಳುಹಿಸಿದ್ದಾನೆ. ಆ ಮೂಲಕ 2047ರೊಳಗೆ ಭಾರತವನ್ನು ವಿಕಸಿತ nಭಾರತವನ್ನಾಗಿ ರೂಪಿಸಬೇಕಿದೆ. ಅದಕ್ಕಾಗಿ ನನಗೆ ದಿನದ 24 ಗಂಟೆಯೂ ದುಡಿಯುವ ಶಕ್ತಿ ನೀಡುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ 2047ರೊಳಗೆ ಭಾರತವನ್ನು ವಿಕಸಿತ ಭಾರತ ಮಾಡುವ ಗುರಿಯಲ್ಲಿ ನಾನು ಯಶಸ್ವಿಯಾಗುವೆ. ಅಲ್ಲಿಯವರೆಗೂ ದೇವರು ನನ್ನನ್ನು ಕರೆಸಿಕೊಳ್ಳುವುದಿಲ್ಲ ಎಂಬ ನಂಬಿಕೆ ಹೊಂದಿದ್ದೇನೆ’ ಎಂದು ತಿಳಿಸಿದ್ದಾರೆ.
ಬಿಜೆಪಿಗೆ 305 ಸ್ಥಾನ: ಅಮೆರಿಕ ರಾಜಕೀಯ ತಜ್ಞ ಬ್ರೆಮ್ಮರ್ ಭವಿಷ್ಯ !
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.