ಯಡಿಯೂರಪ್ಪನವರೇ ನಿಮ್ಮ ಮನೆ ದೇವರು ನಿಮಗೆ ಒಳ್ಳೇದು ಮಾಡಲ್ಲ: ವಿಶ್ವನಾಥ್

Suvarna News   | Asianet News
Published : Jan 13, 2021, 01:37 PM ISTUpdated : Jan 13, 2021, 02:02 PM IST
ಯಡಿಯೂರಪ್ಪನವರೇ ನಿಮ್ಮ ಮನೆ ದೇವರು ನಿಮಗೆ ಒಳ್ಳೇದು ಮಾಡಲ್ಲ: ವಿಶ್ವನಾಥ್

ಸಾರಾಂಶ

ನಿಮ್ಮ ಮನೆ ದೇವರು ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡಲ್ಲ | ಸಿಎಂ ಬಗ್ಗೆ ವಿಶ್ವನಾಥ್ ಮಾತು

ಮೈಸೂರು(ಜ.13): ಯಡಿಯೂರಪ್ಪನವರೇ ನಿಮ್ಮ ಮನೆ ದೇವರು ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡಲ್ಲ ಎಂದು  ಎಚ್. ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೊಟ್ಟ ಮಾತು ಉಳಿಕೊಳ್ಳದ ನಿಮ್ಮನ್ನು ದೇವರು ಕೂಡ ಕ್ಷಮಿಸೋಲ್ಲ. ನೀವು ಎಂತಾ ಸರ್ಕಾರ ಮಾಡಿದ್ದೀರಿ ಯಡಿಯೂರಪ್ಪನವರೇ? 33 ರಲ್ಲಿ 13 ವೀರಶೈವ,11 ಜನ ಒಕ್ಕಲಿಗ,4 ಜನ ಕುರುಬರಿಗೆ ಮಂತ್ರಿ ಕೊಟ್ಟಿದ್ದೀರಾ. ಇದೇನಾ ನಿಮ್ಮ‌ ಸಾಮಾಜಿಕ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.

ನಾಗೇಶ್‌ ಅವರನ್ನು ಯಾಕೇ ತೆಗೀಬೇಕು..? ಮುನಿರತ್ನ ಬದಲು ಯೋಗೇಶ್ವರ್ ಯಾಕೇ ಕೊಡ್ತೀರಾ ಹೇಳಿ..?  ಕೋರ್ಟ್‌ ಆದೇಶಕ್ಕೂ ನನಗೆ ಮಂತ್ರಿ ಸ್ಥಾನ ಕೊಡೋದಕ್ಕು ಸಂಬಂಧ ಇಲ್ಲ. ಆ ಸೈನಿಕನ ಮೇಲೆ 420 ಕೇಸ್ ಇದೆ. ಅವನಿಗೆ ಸಚಿವನನ್ನಾಗಿ ಮಾಡೋಕೆ ದುಂಬಾಲು ಬಿದ್ದಿದ್ದೀರಾ..? ಯಾಕೇ ಎಲ್ಲಾದರೂ ಸಿಕ್ಕಿ ಹಾಕಿಕೊಂಡಿದ್ದೀರಾ ಹೇಳಿ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಸಾರಾ, ಡಿಸಿ ರೋಹಿಣಿ ನಡುವೆ ‘ಮಾಸ್ಕ್‌ ಟಾಕ್‌’!

ಏನಾದರೂ ಬ್ಲಾಕ್ ಮೇಲ್ ಮಾಡ್ತಿದ್ತಾನಾ ಅವನು. ಅವನೇನು ರಾಜೀನಾಮೆ ಕೊಟ್ನಿದ್ನಾ..? ಅಥವಾ ನೀವೇನು ಸೈನಿಕನ ಕೈಗೊಂಬೆ ಆಗಿದ್ದೀರಾ? ನಿಮ್ಮ ಮಾಜಿ‌ ಪಿಎ ಹಾಗೂ ಸ್ನೇನಿಕ ನಿಮ್ಮನ್ನು ಬ್ಲಾಕ್ ಮೇಲ್ ಸಚಿವ ಸ್ಥಾನ ಪಡೆದುಕೊಂಡ್ರಾ ಹೇಳಿ ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!