ಮಾಜಿ ಸಚಿವ ರಾಜಣ್ಣಗೆ ಸಿಹಿ ಸುದ್ದಿ : ಮುಖ್ಯಮಂತ್ರಿ ಸಿದ್ಧರಾಮಯ್ಯ

Kannadaprabha News   | Kannada Prabha
Published : Jan 17, 2026, 07:24 AM IST
KN Rajanna

ಸಾರಾಂಶ

ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಜತೆ ಸಿಹಿ ಸುದ್ದಿನೇ ಇರುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ತುಮಕೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆ.ಎನ್.ರಾಜಣ್ಣ ಅವರ ಮನೆಯಲ್ಲಿ ಔತಣ ಕೂಟದಲ್ಲಿ ಭಾಗವಹಿಸಿದ್ದರು.

ತುಮಕೂರು : ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಜತೆ ಸಿಹಿ ಸುದ್ದಿನೇ ಇರುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ತುಮಕೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆ.ಎನ್.ರಾಜಣ್ಣ ಅವರ ಮನೆಯಲ್ಲಿ ಔತಣ ಕೂಟದಲ್ಲಿ ಭಾಗವಹಿಸಿದ್ದರು.

ಕೋಳಿ ಸಾರು, ಕಾಲುಸೂಪು, ಇಡ್ಲಿ ಸವಿದೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ನನಗೆ ಹುಷಾರು ಇರಲಿಲ್ಲ. ಹಾಗಾಗಿ ಬಾಯಿ ಕೆಟ್ಟು ಹೋಗಿತ್ತು. ಆದ್ದರಿಂದ ಕೋಳಿ ಸಾರು, ಕಾಲುಸೂಪು, ಇಡ್ಲಿ ಸವಿದೆ ಎಂದು ಹೇಳಿದರು.

ಹೈಕಮಾಂಡ್ ಜೊತೆ ಮಾತನಾಡುವುದಾಗಿ ತಿಳಿಸಿದ ಸಿಎಂ

ಈ ವೇಳೆ ಸುದ್ದಿಗಾರರು ರಾಜಣ್ಣ ಅವರಿಗೆ ಮಂತ್ರಿ ಸ್ಥಾನದ ಸಿಹಿ ಸುದ್ದಿ ಕೊಡುವಿರಾ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಹೈಕಮಾಂಡ್ ಜೊತೆ ಮಾತನಾಡುವುದಾಗಿ ತಿಳಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿರುವ ವಿಚಾರ ನನಗೆ ಗೊತ್ತಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಿಲ್ಲಿಯಲ್ಲಿ ರಾಗಾ ಜತೆ ಸಚಿವ ಜಾರ್ಜ್‌ ಚರ್ಚೆ
Karnataka News Live: ಮಾಜಿ ಸಚಿವ ರಾಜಣ್ಣಗೆ ಸಿಹಿ ಸುದ್ದಿ - ಮುಖ್ಯಮಂತ್ರಿ ಸಿದ್ಧರಾಮಯ್ಯ