ಒಳ್ಳೆಯ ಜನರು ರಾಜಕಾರಣಕ್ಕೆ ಬರಬೇಕು: ಬಸವರಾಜ ಹೊರಟ್ಟಿ

Published : Nov 16, 2024, 11:07 PM IST
ಒಳ್ಳೆಯ ಜನರು ರಾಜಕಾರಣಕ್ಕೆ ಬರಬೇಕು: ಬಸವರಾಜ ಹೊರಟ್ಟಿ

ಸಾರಾಂಶ

ರಾಜಕಾರಣ ಹಾಳಾಗಿದೆ ಎಂದು ಎಲ್ಲರೂ ದೂರ ಹೋದರೆ ಮುಂದೇನು?, ಹೀಗಾಗಿ, ಒಳ್ಳೆಯ ಜನರು ರಾಜಕಾರಣಕ್ಕೆ ಬರಬೇಕು. ಶಾಸನ ಸಭೆಗಳನ್ನು ಪ್ರವೇಶಿಸಬೇಕು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್.ಹೊರಟ್ಟಿ ಕರೆ ನೀಡಿದರು.

ಮೈಸೂರು (ನ.16): ರಾಜಕಾರಣ ಹಾಳಾಗಿದೆ ಎಂದು ಎಲ್ಲರೂ ದೂರ ಹೋದರೆ ಮುಂದೇನು?, ಹೀಗಾಗಿ, ಒಳ್ಳೆಯ ಜನರು ರಾಜಕಾರಣಕ್ಕೆ ಬರಬೇಕು. ಶಾಸನ ಸಭೆಗಳನ್ನು ಪ್ರವೇಶಿಸಬೇಕು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್.ಹೊರಟ್ಟಿ ಕರೆ ನೀಡಿದರು. ನಗರದ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಇತಿಹಾಸ, ರಾಜ್ಯಶಾಸ್ತ್ರ ಹಾಗೂ ಪತ್ರಿಕೋದ್ಯಮ ವಿಭಾಗ, ಐಕ್ಯೂಎಸಿ ಮತ್ತು ರಾಜ್ಯ ಪತ್ರಾಗಾರ ಇಲಾಖೆಯ ವಿಭಾಗೀಯ ಪತ್ರಾಗಾರ ಕಚೇರಿ ಸಹಯೋಗದಲ್ಲಿ ಆಯೋಜಿಸಿರುವ ಮೈಸೂರು ಪ್ರಜಾಪ್ರತಿನಿಧಿ ಸಭೆ: ಚಾರಿತ್ರಿಕ ಅವಲೋಕನ ಕುರಿತ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಒಳ್ಳೆಯದೂ ಆಗುತ್ತಿದೆ. ಕೆಟ್ಟದ್ದೂ ಆಗುತ್ತಿದೆ. ಪ್ರಜ್ಞಾವಂತರು, ಯುವಜನರು ರಾಜಕೀಯ ಕ್ಷೇತ್ರದಿಂದ ಹಿಂದೆ ಸರಿಯಬಾರದು. ಸರ್ಕಾರಿ ನೌಕರಿ ಪಡೆದುಕೊಂಡರೆ ಸಾಕೆಂದು ಭಾವಿಸದೇ ಅಥವಾ ಕೆಲಸಕ್ಕಷ್ಟೆ ಸೀಮಿತವಾಗಬಾರದು. ರಾಜಕಾರಣಕ್ಕೂ ಬರಬೇಕು ಎಂದರು. ಎಲ್ಲಾ ಕ್ಷೇತ್ರಗಳಂತೆಯೇ ರಾಜಕಾರಣದಲ್ಲೂ ಗುಣಮಟ್ಟ ಕುಸಿದಿದೆ. ಹಣ ಕೊಟ್ಟು ಮತ ಕೇಳುವವರು ಹಾಗೂ ಹಣ ಪಡೆದು ಮತ ಹಾಕುವವರು ಇರುವವರೆಗೂ ಪ್ರಜಾಪ್ರಭುತ್ವ ಸುಭದ್ರವಾಗಿರುತ್ತದೆಯೇ?, ಪ್ರತಿ ಪಕ್ಷದಲ್ಲೂ ಜಾತಿ ನೋಡುತ್ತಾರೆ. ಟಿಕೆಟ್ ಕೊಡುವಾಗ ಹಣವೆಷ್ಟಿದೆ? ಎಷ್ಟು ಕೋಟಿ ಖರ್ಚು ಮಾಡಬಲ್ಲ? ಎಂಬುದನ್ನೇ ಪ್ರಮುಖವಾಗಿ ಗಮನಿಸುವುದು ನಡೆಯುತ್ತಿದೆ ಎಂದು ವಿಷಾದಿಸಿದರು.

ಸಿಎಂ ಬಂಧನವಾಗುತ್ತದೆ ಎಂದು ಯಾರು ನಿಮಗೆ ಮಾಹಿತಿ ಕೊಟ್ಟಿದ್ದು?: ಎ.ಎಸ್.ಪೊನ್ನಣ್ಣ

ಮೈಸೂರು ಮಹಾರಾಜರು ವೈಶಿಷ್ಟ್ಯ ಮೆರೆದು ಪ್ರಜಾಪ್ರತಿನಿಧಿ ಸಭೆಯನ್ನು ಆರಂಭಿಸಿದರು. ಜನರ ಅಹವಾಲುಗಳನ್ನು ಕೇಳುವ ಕೆಲಸ ಮಾಡಿದರು. ವಿಧಾನಪರಿಷತ್ತು ಪರಿಕಲ್ಪನೆ ಹುಟ್ಟಿದ್ದೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾರಣದಿಂದ ಎಂದು ಅವರು ಸ್ಮರಿಸಿದರು. ವಿದ್ಯಾರ್ಥಿಗಳು ಗುರು, ಹಿರಿಯರನ್ನು ಗೌರವಿಸಬೇಕು. ಶಿಸ್ತಿಗೆ ಹೆಚ್ಚಿನ ಮಹತ್ವವನ್ನು ಕೊಡಬೇಕು. ಸಮಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಸ್ತೆಂಬ ಎಣ್ಣೆ ಇಲ್ಲದಿದ್ದರೆ ಜೀವನದ ಹಣತೆ ಬೆಳಗುವುದಿಲ್ಲ ಎಂಬುದನ್ನು ಮರೆಯಬಾರದು ಎಂದರು.

ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕ ಡಾ. ಗವಿಸಿದ್ದಯ್ಯ ಮಾತನಾಡಿ, ಮೈಸೂರು ಸರ್ಕಾರದ ಆಡಳಿತದ 39 ಇಲಾಖೆಗಳ 2 ಲಕ್ಷಕ್ಕೂ ಹೆಚ್ಚು ಮೂಲ ದಾಖಲೆ ಸಂರಕ್ಷಿಸಿ ಅಧ್ಯಯನಶೀಲರಿಗೆ ಒದಗಿಸುವ ಕೆಲಸವನ್ನು ಇಲಾಖೆಯಿಂದ ಮಾಡಲಾಗುತ್ತಿದೆ. ಲಭ್ಯ ದಾಖಲೆಗಳ ಡಿಜಿಟಲೀಕರಣ ನಡೆಯುತ್ತಿದೆ. ಸದ್ಯ 1.08 ಕೋಟಿ ಪುಟಗಳಷ್ಟು ಮಾಹಿತಿ ಇಲಾಖೆಯ ಜಾಲತಾಣದಲ್ಲಿ ಲಭ್ಯವಿದೆ ಎಂದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ, ಪ್ರಾಂಶುಪಾಲ ಡಾ.ಎಂ. ಪ್ರಭು ಇದ್ದರು.

ಕುಮಾರಸ್ವಾಮಿ ಹೇಳಿದಂತೆ ಎಸ್ಐಟಿ ರಚನೆ ಮಾಡಲಾಗಲ್ಲ: ಸಚಿವ ಕೆ.ಜೆ.ಜಾರ್ಜ್

ಪ್ರಬಂಧಗಳ ಮಂಡನೆ: ಮೈಸೂರು ಪ್ರಜಾಪ್ರತಿನಿಧಿ ಸಭೆ, ಉಗಮ ಮತ್ತು ಬೆಳೆವಣೆಗೆ ಕುರಿತು ಡಾ.ಮಹಾದೇವ ಸ್ವಾಮಿ, ಪ್ರಜಾಪ್ರಭುತ್ವದ ಹಿನ್ನೆಲೆ ಕುರಿತು ಮೈಸೂರು ವಿವಿ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನೆ ಮತ್ತು ವಿಸ್ತರಣ ಕೇಂದ್ರದ ನಿರ್ದೇಶಕ ಪ್ರೊ.ಜೆ.ಸೋಮಶೇಖರ್ ಹಾಗೂ ಮೈಸೂರು ಪ್ರಜಾಪ್ರತಿನಿಧಿ ಸಭೆಯ ಸದಸ್ಯರ ಆಯ್ಕೆ ಹಿನ್ನೆಲೆ ಕುರಿಯು ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪ್ರಬಂಧ ಮಂಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌