
ಗದಗ (ಫೆ.19) : ಬಿಜೆಪಿಯದ್ದು ರಾಕ್ಷಸರ ಸರ್ಕಾರವಾಗಿದೆ. ಕಮೀಷನ್ ಕೇಳುವ, ಕೊಲೆ ಮಾಡಿ ಎನ್ನುವ ಸರ್ಕಾರವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ(Randeep surjewala) ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದಿಂದ ನಡೆದ ಗೃಹಜ್ಯೋತಿ, ಗೃಹಲಕ್ಷ್ಮೇ ಯೋಜನೆಯ ಕಾಂಗ್ರೆಸ್ ಪಕ್ಷದ ಭರವಸೆ ಪತ್ರವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಜನರ ಕಿವಿ ಮೇಲೆ ಹೂವಿಡುವ ಬಜೆಟ್: ಸುರ್ಜೇವಾಲಾ
ಎಚ್.ಕೆ. ಪಾಟೀಲ, ರಣದೀಪ ಅವರನ್ನು ಸಾಯಿಸಿದರೂ ಕಾಂಗ್ರೆಸ್ ಹೆದರುವುದಿಲ್ಲ. ಆದರೆ, ನಾವು ಬಡವರ ಪರವಾಗಿ ಕೆಲಸ ಮಾಡುವ ನಮ್ಮ ತತ್ವ, ಸಿದ್ಧಾಂತಗಳನ್ನು ಸಾಯಿಸಲು ಬಿಡುವುದಿಲ್ಲ. ಇಂದಿರಾ ಗಾಂಧಿ, ರಾಜೀವ ಗಾಂಧಿ ಸೇರಿ ಹಲವಾರು ನಮ್ಮ ನಾಯಕರನ್ನು ಹತ್ಯೆ ಮಾಡಿದ್ದಾರೆ. ಆದರೂ ಕಾಂಗ್ರೆಸ್ ಬಡವರ ಪರವಾಗಿ ಕೆಲಸ ಮಾಡುವ ಧ್ವನಿ ಕಡಿಮೆಯಾಗಿದೆಯೇ? ಎಂದು ಕಿಡಿಕಾರಿದರು.
ನರಕದಲ್ಲೂ ಲಂಚ:
ಬಿಜೆಪಿ(BJP)ಯ ದುಷ್ಟ, ರಾಕ್ಷಸ ಪ್ರವೃತ್ತಿಯ ಬಗ್ಗೆ ಗದಗ ಜಿಲ್ಲೆಯ ಶ್ರೀಗಳೊಬ್ಬರು ಬಹಿರಂಗವಾಗಿಯೇ ಹೇಳಿದ್ದಾರೆ. ರಾಕ್ಷಸ ಪ್ರವೃತ್ತಿಯುಳ್ಳ ಬಿಜೆಪಿಯರಿಗೆ ನರಕದಲ್ಲಿಯೂ ಜಾಗ ಸಿಗುವುದಿಲ್ಲ. ಅಲ್ಲೂ ಅವರು ಲಂಚ ಕೇಳುತ್ತಾರೆ. ಹೀಗಾಗಿ, ಅವರಿಗೆ ಪ್ರತ್ಯೇಕ ಜಾಗವೇ ಬೇಕು ಎಂದು ಕುಟುಕಿದರು.
ಬಿಜೆಪಿಗರ 40% ಕಮೀಷನ್ ನಿಂದಾಗಿ ಹಲವಾರು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಜನಸಾಮಾನ್ಯರ ಕೆಲಸಕ್ಕಾಗಿ ನಿಮಗೆ ನೀಡಬೇಕಾದ ಕಮೀಷನ್ ನೀಡುತ್ತೇವೆ. ಅವರ ಜೀವ ಮರಳಿ ಕೊಡಿಸುತ್ತೀರಾ? ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಯತ್ನಾಳ ಅವರು ತಮ್ಮದೇ ಸರ್ಕಾರ ಮತ್ತು ಸಚಿವರ ವಿರುದ್ಧ ಸಾಕಷ್ಟುಆರೋಪ ಮಾಡುತ್ತಿದ್ದಾರೆ. ಅವರ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ? ಎಂದರು.
ಕಾಂಗ್ರೆಸ್ಸಿಗೆæ ಆಶೀರ್ವದಿಸಿ:
ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮೀಟಿಯಿಂದ ರಾಜ್ಯಾದ್ಯಂತ ಜನಧ್ವನಿ ಬಸ್ ಯಾತ್ರೆ ಮೂಲಕ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರಗಳನ್ನು ಜನರಿಗೆ ತಲುಪಿಸುವ ಮೂಲಕ ಮುಂಬರುವ ದಿನಮಾನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ಗೆ ಆಶೀರ್ವದಿಸಿ ಪಕ್ಷ ಅಧಿಕಾರಕ್ಕೆ ಬಂದರೆ ಚುನಾವಣಾ ಪ್ರಣಾಳಿಕೆಯಲ್ಲಿ ಸೂಚಿಸಿರುವಂತೆ ರಾಜ್ಯದ ಪ್ರತಿಮನೆಗೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ಮನೆಯ ಯಜಮಾನಿಗೆ .2000 ನೀಡಲು ಉದ್ದೇಶಿದೆ ಎಂದರು.
Karnataka Budget 2023: ಕೊಡಗಿನ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರು. ವಿಶೇಷ ಪ್ಯಾಕೇಜ್!
ಈ ವೇಳೆ ಗೃಹ ಜ್ಯೋತಿ, ಗೃಹ ಲಕ್ಷ್ಮೇ ಯೋಜನೆಯ ಕಾಂಗ್ರೆಸ್ ಪಕ್ಷದ ಭರವಸೆ ಪತ್ರವನ್ನು ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಬಿಡುಗಡೆಗೊಳಿಸಿದರು.
ವಿಪ ಸದಸ್ಯ ಸಲೀಂ ಅಹ್ಮದ, ಮಯೂರ ಜಯಕಮಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಟಿ. ಈಶ್ವರ, ವಾಸಣ್ಣ ಕುರಡಗಿ, ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.