ಬಿಜೆಪಿ ಅಧ್ಯಕ್ಷರಂತೆ ರಾಜ್ಯಪಾಲರ ಕೆಲಸ: ಬಿ.ಕೆ. ಹರಿಪ್ರಸಾದ್‌

Published : Aug 21, 2024, 04:56 AM IST
ಬಿಜೆಪಿ ಅಧ್ಯಕ್ಷರಂತೆ ರಾಜ್ಯಪಾಲರ ಕೆಲಸ: ಬಿ.ಕೆ. ಹರಿಪ್ರಸಾದ್‌

ಸಾರಾಂಶ

ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ಕೆಡವುತ್ತಿತ್ತು. ಈಗ ಬೇರೆ ವಾಮಮಾರ್ಗಗಳ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಸದ್ಯ ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ, ನ್ಯಾಯಾಂಗ ಹೋರಾಟ ಆಗುತ್ತಿದೆ ಎಂದ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ 

ಮಂಗಳೂರು(ಆ.21):  ರಾಜ್ಯದ ರಾಜ್ಯಪಾಲರು ರಾಜಭವನವನ್ನು ದುರುಪಯೋಗ ಮಾಡುತ್ತಿದ್ದಾರೆ. ಅವರು ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗಲ್ಲ. ಆದರೆ ಇವರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ಕೆಡವುತ್ತಿತ್ತು. ಈಗ ಬೇರೆ ವಾಮಮಾರ್ಗಗಳ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಸದ್ಯ ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ, ನ್ಯಾಯಾಂಗ ಹೋರಾಟ ಆಗುತ್ತಿದೆ ಎಂದರು.

ಬಿಜೆಪಿ ತಂದಿದ್ದ ಭೂಕಾಯ್ದೆ ವಾಪಸ್: ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಯಡಿಯೂರಪ್ಪ ಪ್ರಕರಣದಲ್ಲಿ 20 ಕೋಟಿ ರು. ಲಂಚವನ್ನು ಚೆಕ್ ಮೂಲಕ ಪಡೆಯಲಾಗಿತ್ತು. ಗಡೀಪಾರಾಗಿದ್ದ ಅಮಿತ್ ಶಾ ಕೂಡ ಮಂತ್ರಿಯಾಗಿಲ್ವಾ? ಬಿಜೆಪಿ ನಾಯಕರ ಮೇಲೆ ಎಷ್ಟೋ ಗಂಭೀರ ಆರೋಪಗಳಿದ್ದವು. ಈಗ ಮುಖ್ಯಮಂತ್ರಿ ಮೇಲಿನ ಆರೋಪ ಕಪೋಲಕಲ್ಪಿತ ಎಂದರು.

ರಾಜ್ಯಪಾಲರು ಈ ಹಿಂದೆ ದಲಿತ ರಾಜಕಾರಣಿ ಆಗಿದ್ದವರು, ಗೆಹ್ಲೋಟ್ ಅವರನ್ನು ನಾನು ಹತ್ತಿರದಿಂದ ಬಲ್ಲೆ. ಬಿಜೆಪಿಯವರಿಗೆ ದಲಿತರ ಮೇಲೆ ಪ್ರೀತಿ ಇದ್ದರೆ ಸಂವಿಧಾನ ಬದಲಾವಣೆ ಅಂತ ಯಾಕೆ ಮಾತನಾಡುತ್ತಿದ್ದರು ಎಂದು ಬಿಕೆ ಹರಿಪ್ರಸಾದ್‌ ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ