ಮೊದಲ ಹಂತದ ಗ್ರಾಪಂ ಸಮರಕ್ಕೆ ನಾಮಪತ್ರ ಸಲ್ಲಿಕೆ ಶುರು

Kannadaprabha News   | Asianet News
Published : Dec 07, 2020, 07:27 AM IST
ಮೊದಲ ಹಂತದ ಗ್ರಾಪಂ ಸಮರಕ್ಕೆ  ನಾಮಪತ್ರ ಸಲ್ಲಿಕೆ ಶುರು

ಸಾರಾಂಶ

ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಡಿಸೆಂಬರ್ 14ರವರೆಗೆ ಅವಕಾಶವಿದೆ. 

ಬೆಂಗಳೂರು (ಡಿ.07) :  ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಅಧಿಸೂಚನೆ ಸೋಮವಾರ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಈಗಾಗಲೇ ಹಳ್ಳಿಗಳಲ್ಲಿ ರಾಜಕೀಯ ಅಖಾಡ ಸಿದ್ಧಗೊಂಡಿದ್ದು, ಅಧಿಕೃತವಾಗಿ ಸೋಮವಾರ ನಾಮಪತ್ರ ಸಲ್ಲಿಕೆ ಪ್ರಾರಂಭವಾದ ನಂತರ ಮತ್ತಷ್ಟುರಂಗು ಪಡೆಯಲಿದೆ.

ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಆಯಾ ಜಿಲ್ಲಾಡಳಿತಗಳು ಗ್ರಾಪಂ ಪಂಚಾಯಿತಿ ಚುನಾವಣೆ ಅಧಿಸೂಚನೆ ಹೊರಡಿಸಲಿವೆ. ಅದರಂತೆ ರಾಜ್ಯದಲ್ಲಿ ಡಿ.22ರಂದು ಮೊದಲನೇ ಹಂತದಲ್ಲಿ 3,021 ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳು ಸೋಮವಾರದಿಂದ ಡಿ.11ರ ವರೆಗೆ ನಾಮಪತ್ರ ಸಲ್ಲಿಸಬಹುದುದಾಗಿದೆ. ಡಿ.12ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಡಿ.14ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು' ...

ಈ ಮೊದಲು ರಾಜ್ಯ ಚುನಾವಣಾ ಆಯೋಗ ಘೋಷಿಸಿದ್ದ ಪ್ರಕಾರ, 2,930 ಗ್ರಾ.ಪಂ.ಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಸುವುದಾಗಿ ತಿಳಿಸಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ನಡೆಸುವ 97 ಗ್ರಾ.ಪಂ. ಜೊತೆಗೆ ಎರಡನೇ ಹಂತದಲ್ಲಿ ನಡೆಸಬೇಕಿದ್ದ 112 ಗ್ರಾ.ಪಂ.ಗಳಿಗೂ ಮೊದಲ ಹಂತದಲ್ಲಿಯೇ ಚುನಾವಣೆ ನಡೆಸುವುದಾಗಿ ಘೋಷಿಸಿದೆ. ಇದರ ಜೊತೆಗೆ 2,930ರ ಪೈಕಿ 21 ಗ್ರಾ.ಪಂ.ಗಳು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತನೆಯಾಗಿರುವುದರಿಂದ ವಿವಿಧ ಜಿಲ್ಲೆಗಳ 21 ಗ್ರಾ.ಪಂ.ಗಳಿಗೆ ಚುನಾವಣೆ ಕೈಬಿಟ್ಟಿದೆ. ಹೀಗಾಗಿ, 2,930ರ ಜೊತೆಗೆ ಚಿಕ್ಕಮಗಳೂರು ಜಿಲ್ಲೆಯ 112 ಸೇರಿ ಒಟ್ಟಾರೆ 3,021 ಪಂಚಾಯಿತಿಗಳಿಗೆ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ
ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ