
ಬೆಂಗಳೂರು (ಜೂ.17): ರಾಜ್ಯದ ಜನರಿಗೆ ಕೊಟ್ಟ ಭರವಸೆಯಂತೆ 5 ಗ್ಯಾರಂಟಿಗಳನ್ನು ನೀಡಲು ಕಾಂಗ್ರೆಸ್ ಸರಕಾರ ಯೋಜನೆ ಹಾಕಿಕೊಂಡಿದ್ದು, ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ - ಉಚಿತ ಬೆಳಕು, ಸುಸ್ತಿರ ಬದುಕು ಎಂಬ ಟ್ಯಾಗ್ಲೈನ್ ನಡಿ ಯೋಜನೆಗೆ ಸಂಬಂಧಿಸಿದ ಪ್ರಕಟಣೆ ಹೊರಡಿಸಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿಯನ್ನು 2023ರ ಜೂನ್ 18ರಿಂದ ಪ್ರಾರಂಭವಾಗಲಿದೆ. ಈ ಯೋಜನೆಯಡಿ ಲಾಭ ಪಡೆಯಲಿಚ್ಛಿಸುವ ಫಲಾನುಭವಿಗಳಿಗಾಗಿ ವಿಶೇಷವಾಗಿ ಸೃಜಿಸಲಾಗಿರುವ ಕಸ್ಟಮ್ ಮೇಡ್ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಬೇಕು. ಮಾಸಿಕ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ಬಗ್ಗೆ ಹಲವು ಮಾನದಂಡಗಳನ್ನು ಸರಕಾರ ಬಿಡುಗಡೆ ಮಾಡಿದೆ. ಜೊತೆಗೆ ಹೆಸರು ನೋಂದಾಯಿಸಲು ಕ್ಯೂ ಆರ್ ಕೋಡ್ ಕೂಡ ನೀಡಲಾಗಿದೆ.
ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿಗಳಿಗೆ ಮುಹೂರ್ತ್ ಫಿಕ್ಸ್ !: ಸೋಮವಾರದಿಂದ 'ಶಕ್ತಿ'ಸ್ಮಾರ್ಟ್ ಕಾರ್ಡ್ಗೆ ಅರ್ಜಿ ಸ್ವೀಕಾರ
ಗೃಹಜ್ಯೋತಿ ಯೋಜನೆ ನೋಂದಣಿಯ ಪ್ರಮುಖ ಮಾನದಂಡಗಳು ಇಂತಿದೆ:
ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ ಬಂಪರ್..?
ಹಿಂದಿನ ವರ್ಷದ ಸರಾಸರಿ ಬಳಕೆಯ ಶೇ.10 ರಷ್ಟುಹೆಚ್ಚುವರಿ ವಿದ್ಯುತ್ ಉಚಿತವಾಗಿ ಬಳಸಬಹುದು. ಗರಿಷ್ಠ ವಿದ್ಯುತ್ ಬಳಕೆ ಮಿತಿ 200 ಯುನಿಟ್ ದಾಟಿದರೆ ಪೂರ್ಣ ಶುಲ್ಕ ಪಾವತಿಸಬೇಕು.
Karnataka Textbook Revision: ಪಠ್ಯ ಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ, ಕನ್ನಡ
ಯೋಜನೆ ಹಾಗೂ ಅರ್ಜಿ ಸಲ್ಲಿಕೆ ಸಂಬಂಧ ಯಾವುದೇ ಗೊಂದಲಗಳಿದ್ದರೂ ಹೆಚ್ಚಿನ ಮಾಹಿತಿಗೆ 1912ಗೆ ಸಂಪರ್ಕಿಸಬಹುದು ಎಂದು ಇಂಧನ ಇಲಾಖೆ ಪ್ರಕಟಣೆ ಮೂಲಕ ಈಗಾಗಲೇ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.