ಡಿಕೆಶಿ ಭೇಟಿ ಮಾಡಿದ ಜೆಡಿಎಸ್ ಮುಖಂಡ ಜಿಟಿ​ಡಿ

Kannadaprabha News   | Asianet News
Published : Oct 08, 2020, 07:07 AM IST
ಡಿಕೆಶಿ ಭೇಟಿ ಮಾಡಿದ  ಜೆಡಿಎಸ್ ಮುಖಂಡ ಜಿಟಿ​ಡಿ

ಸಾರಾಂಶ

ಮಾಜಿ ಸಚಿವ ಜೆಡಿಎಸ್ ಹಿರಿಯ ಮುಖಂಡರಾದ ಜಿ ಟಿ ದೇವೇಗೌಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ

ಬೆಂಗಳೂರು (ಅ.08): ‘ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮೇಲೆ ಐಟಿ, ಇಡಿ, ಈಗ ಸಿಬಿಐ ಹೀಗೆ ಒಂದರ ಮೇಲೊಂದು ದಾಳಿ ನಡೆಯುತ್ತಿರುವುದರಿಂದ ಅವರು ಬಹಳ ನೊಂದಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ದಾಳಿ. ಡಿ.ಕೆ.ಶಿವಕುಮಾರ್‌ ಮತ್ತು ನಾನು ಬಹಳ ವರ್ಷದ ಸ್ನೇಹಿತರು. ಹಾಗಾಗಿ ಭೇಟಿ ನೀಡಿ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದೇನೆ’ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ಡಿ.ಕೆ.ಶಿವಕುಮಾರ್‌ ಅವರ ಮೇಲೆ ದಾಳಿ ನಡೆದಿತ್ತು. ಐಟಿ- ಇಡಿ ದಾಳಿ ನಡೆಸಿ ಶಿವಕುಮಾರ್‌ ಅವರನ್ನು ಬಂಧಿಸಿದ್ದರು. ಯಾವುದೇ ಸರ್ಕಾರ ಇರಲಿ ಯೋಚನೆ ಮಾಡಬೇಕು, ಚುನಾವಣೆ ಘೋಷಣೆಯಾದ ಬಳಿಕ ಈ ರೀತಿ ದಾಳಿ ಮಾಡಿಸುವುದು ಸರಿ ಅಲ್ಲ. ಇದು ರಾಜಕೀಯ ಪ್ರೇರಣೆ ದಾಳಿ ಎಂದು ಜನರು ಭಾವಿಸಿದ್ದಾರೆ’ ಎಂದರು.

ಬೈ ಎಲೆಕ್ಷನ್: ಡಿಕೆಶಿಯನ್ನು ದಿಢೀರ್ ಭೇಟಿಯಾದ ಆರ್.ಆರ್‌. ನಗರ ಅಭ್ಯರ್ಥಿ..! ...

‘ಮೈತ್ರಿ ಸರ್ಕಾರ ಪತನದ ಬಳಿಕ ತಮ್ಮದೇ ಪಕ್ಷ ಜೆಡಿಎಸ್‌ ನಾಯಕರಿಂದ ಅಂತರ ಕಾಯ್ದುಕೊಳ್ಳುತ್ತಿದ್ದೀರಲ್ಲ’ ಎಂಬ ಪ್ರಶ್ನೆಗೆ, ‘ಕೊರೋನಾದಿಂದಾಗಿ ಹೆಚ್ಚು ಓಡಾಡುವ ಹಾಗಿಲ್ಲ. ಎಲ್ಲವೂ ನಿಮಗೆ ಗೊತ್ತಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನಾವು ಸಚಿವರಾಗಿದ್ದೆವು.

ಬಹಳ ವರ್ಷಗಳಿಂದ ಸ್ನೇಹಿತರಾದ ನಾವು ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸಿ, ಮುಂಬೈಗೂ ಸಹ ಹೋಗಿದ್ದೆವು. ಉಪಮುಖ್ಯಮಂತ್ರಿಯಾಗುವುದಾಗಿದ್ದರೆ ಬಿಜೆಪಿಯಿಂದ ಆಗಲೇ ಆಗಬಹುದಿತ್ತು. ಮೊದಲೇ ತಮಗೆ ಬಿಜೆಪಿಯಿಂದ ಆಫರ್‌ ಬಂದಿತ್ತು. ಆದರೆ ನಾವು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕೆಂದು ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡೆವು. ಐದು ವರ್ಷ ಅವರೇ ಇರಬೇಕೆಂದು ಬಯಸಿದ್ದೆವು. ಅವರನ್ನು ನಾವೇ ಮುಖ್ಯಮಂತ್ರಿ ಮಾಡಿ ನಾವೇ ಅಧಿಕಾರದಿಂದ ಇಳಿಸಲು ಪ್ರಯತ್ನಿಸಿದ್ದೆವು ಎನ್ನುವುದೆಲ್ಲ ಸುಳ್ಳು’ ಎಂದು ಜಿ.ಟಿ.ದೇವೇಗೌಡ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ