ಕೊರೋನಾ ಮಹಾಮಾರಿಗೆ ಮತ್ತೋರ್ವ ಬಿಜೆಪಿ ಸಂಸದ ಬಲಿ..!

Published : Dec 01, 2020, 08:39 PM IST
ಕೊರೋನಾ ಮಹಾಮಾರಿಗೆ ಮತ್ತೋರ್ವ ಬಿಜೆಪಿ ಸಂಸದ ಬಲಿ..!

ಸಾರಾಂಶ

ಮಹಾಮಾರಿ ಮತ್ತೆ ಅಟ್ಟಹಾಸ ಮೆರೆದಿದ್ದು,  ಬಿಜೆಪಿಯ ಮತ್ತೋರ್ವ ಸಂಸದ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

ಗಾಂಧಿನಗರ, (ಡಿ.01): ಗುಜರಾತ್‍ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಅವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಭಾರದ್ವಾಜ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗುತ್ತಿದ್ದಂತೆ ರಾಜ್‍ಕೋಟ್‍ನ ಆಸ್ಪತ್ರೆಯ ಐಸಿಯುನಲ್ಲಿ 1 ತಿಂಗಳ ಕಾಲ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ 2 ತಿಂಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಂಗಳವಾರ) ಕೊನೆಯುಸಿರೆಳೆದಿದ್ದಾರೆ.

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಬಿಜೆಪಿ MLA ನಿಧನ

ಈ ಮೂಲಕ ಗುಜರಾತ್ ಇಬ್ಬರು ರಾಜ್ಯಸಭಾ ಸದಸ್ಯರನ್ನು ಕಳೆದುಕೊಂಡಂತಾಗಿದೆ. ನವೆಂಬರ್ 26ರಂದು ರಾಜ್ಯಸಭಾ ಸದಸ್ಯ, ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ಕೊನೆಯುಸಿರೆಳೆದಿದ್ದರು.

ಭಾರದ್ವಾಜ್ ಅವರು ರಾಜ್‍ಕೋಟ್‍ನ ಬಿಜೆಪಿ ಹಿರಿಯ ನಾಯಕರಾಗಿದ್ದು, ವೃತ್ತಿಯಲ್ಲಿ ವಕೀಲರಾಗಿದ್ದರು. ಜುಲೈನಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ