'ದೇವರಾಜ ಅರಸು ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ'

Suvarna News   | Asianet News
Published : Aug 20, 2020, 11:44 AM IST
'ದೇವರಾಜ ಅರಸು ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ'

ಸಾರಾಂಶ

ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ  ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ, ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದ ಹೆಚ್‌ಡಿಕೆ| 

ಬೆಂಗಳೂರು(ಆ.20): ಇಂದು ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ ಜನ್ಮದಿನವಾಗಿದೆ. ಹೀಗಾಗಿ ಈ ಸಂದರ್ಭದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ ಮಾಡುವ ದೇವರಾಜ ಅರಸು ಅವರ ಸೇವಾ ಕಾರ್ಯಗಳನ್ನ ಸ್ಮರಿಸಿಕೊಂಡಿದ್ದಾರೆ.

ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ. 

 

8 ಬಾರಿ ಅರಸು ಕುಟುಂಬದವರ ಆಯ್ಕೆ : 1989ರ ನಂತರ ಗೆಲ್ಲಲಿಲ್ಲ

ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು  ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಹೇಳಿದ್ದಾರೆ.

 

ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ  ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಹೆಚ್‌ಡಿಕೆ ಡಿ. ದೇವರಾಜ ಅರಸು ಅವರ ಕಾರ್ಯವನ್ನ ಸ್ಮರಿಸಿಕೊಂಡಿದ್ದಾರೆ. 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ