'ಒಂದ್ಕಡೆ ಕೊರೋನಾ ಮತ್ತೊಂದ್ಕಡೆ ಭಾರೀ ಮಳೆ, ಬಿಎಸ್‌ವೈ ಸರ್ಕಾರಕ್ಕೆ ಅಗ್ನಿಪರೀಕ್ಷೆ'

Published : Aug 07, 2020, 12:18 PM IST
'ಒಂದ್ಕಡೆ ಕೊರೋನಾ ಮತ್ತೊಂದ್ಕಡೆ ಭಾರೀ ಮಳೆ, ಬಿಎಸ್‌ವೈ ಸರ್ಕಾರಕ್ಕೆ ಅಗ್ನಿಪರೀಕ್ಷೆ'

ಸಾರಾಂಶ

ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗಬಾರದು| ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ| ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆ| ಸಚಿವರು ಮತ್ತು ಅಧಿಕಾರಿಗಳು ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು|

ಬೆಂಗಳೂರು(ಆ.07):  ರಾಜ್ಯ ಸರ್ಕಾರಕ್ಕೀಗ ಈಗ ಅಗ್ನಿ ಪರೀಕ್ಷೆ ಎದುರಾಗಿದೆ. ಇದನ್ನು ಎದುರಿಸಲು ಸಮರ್ಥವಾಗಿ ಸರ್ಕಾರ ಸಜ್ಜಾಗಬೇಕಿದೆ. ಮುಂಗಾರು ಮಳೆಗೆ ರಾಜ್ಯದ ಜನರು ನಲುಗಿದ್ದಾರೆ. ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸಬೇಕು. ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

 

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. 

 

ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ ಎಂದಿದ್ದಾರೆ. 

ಕೊಡಗಿನಲ್ಲಿ ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ಮಳೆ ಅಡ್ಡಿ

 

ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದೆ. ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ.  ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ  ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕು. ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಆಗ್ರಹಿಸಿದ್ದಾರೆ.

ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗವರ್ನರ್ ಚುನಾವಣೆಗೆ ನಿಂತ 15 ವರ್ಷದ ಹುಡುಗ‌ ಡೀನ್ ರಾಯ್.. ನಿಯಮ ಏನು ಹೇಳುತ್ತದೆ?
'ದ್ಹನಿ ಎತ್ತದಿದ್ರೆ ಮೂಲೆಗೆ ಕೂರಿಸ್ತಾರೆ..' ಮಾಜಿ ಸಚಿವೆ ಮೋಟಮ್ಮ ಸಿಎಂ ಡಿಕೆಶಿ ವಿರುದ್ಧ ಗರಂ ಆಗಿದ್ಯಾಕೆ?