ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಐದಾರು ಗಂಟೆಯಲ್ಲೇ ನಾಗೇಶ್‌ಗೆ ಮಹತ್ವದ ಹುದ್ದೆ

Published : Jan 13, 2021, 10:17 PM IST
ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಐದಾರು ಗಂಟೆಯಲ್ಲೇ ನಾಗೇಶ್‌ಗೆ ಮಹತ್ವದ ಹುದ್ದೆ

ಸಾರಾಂಶ

ಸಂಪುಟ ವಿಸ್ತರಣೆಯ ಮಧ್ಯೆ ನಾಗೇಶ್ ಅವರು ಅನಿವಾರ್ಯವಾಗಿ ರಾಜೀನಾಮೆ ನೀಡಿದ್ದಾರೆ. ಇದಾದ ಐದಾರು ಗಂಟೆಯಲ್ಲಿಯೇ ಅವರಿಗೆ ಮಹತ್ವದ ಹುದ್ದೆ ನೀಡಲಾಗಿದೆ.

ಬೆಂಗಳೂರು, (ಜ.13): ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಸಮಾಧಾನಗೊಂಡಿದ್ದ ಎಚ್.ನಾಗೇಶ್ ಅವರಿಗೆ ಸಿಎಂ ಬಿಎಸ್‌ ಯಡಿಯೂರಪ್ಪ ಗುಡ್‌ ನ್ಯೂಸ್ ಕೊಟ್ಟಿದ್ದಾರೆ.

ಹೌದು...ನಾಗೇಶ್ ಅವರನ್ನ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ನಾಗೇಶ್​ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದಂತೆಯೇ ಸ್ವಕ್ಷೇತ್ರದಲ್ಲೇ ಸಂಭ್ರಮಾಚರಣೆ!

ಅಬಕಾರಿ ಸಚಿವರಾಗಿದ್ದ ನಾಗೇಶ್,  ಸಿಎಂ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದರು. ನಾನ್ ಮಾಡಿದ್ದಾದ್ರೂ ಏನು..? ಎಂದು ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ನಾಗೇಶ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. 

ಈ ಹಿನ್ನೆಲೆಯಲ್ಲಿ ನಾಗೇಶ್ ಅವರನ್ನು ಸಮಾಧಾನ ಮಾಡುವ ಸಲುವಾಗಿ ಸಿಎಂ ಯಡಿಯೂರಪ್ಪ ಅವರು, ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ.

ಸಿಎಂ ಹೇಳಿದ್ದಕ್ಕೆ ರಾಜೀನಾಮೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪನವರು ಮುಂದಿನ ದಿನಗಳಲ್ಲಿ ಉನ್ನತ ಹುದ್ದೆ ನೀಡುವುದಾಗಿ ಹೇಳಿದ್ದಾರೆ. ಇದರಿಂದ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ