ಹೊಸ ಖಾತೆಗೆ ಬೇಡಿಕೆ ಇಟ್ಟ ಸಚಿವ: ಸಿಎಂಗೆ ಶುರುವಾಯ್ತು ಮತ್ತೊಂದು ತಲೆನೋವು..!

Published : Jan 07, 2021, 01:55 PM IST
ಹೊಸ ಖಾತೆಗೆ ಬೇಡಿಕೆ ಇಟ್ಟ ಸಚಿವ: ಸಿಎಂಗೆ ಶುರುವಾಯ್ತು ಮತ್ತೊಂದು ತಲೆನೋವು..!

ಸಾರಾಂಶ

ಸಚಿವ ಸಂಪುಟಕ್ಕೆ ಮುಹೂರ್ತ ಕೂಡಿಬರುತ್ತಿಲ್ಲ. ಇದರ ಮಧ್ಯೆ ಸಚಿವರೊಬ್ಬರು ಬೇರೊಂದು ಖಾತೆ ನೀಡುವಂತೆ ಆಗ್ರಹಿಸಿದ್ದಾರೆ. ಇದರಿಂದ ಸಿಎಂಗೆ ಮತ್ತೊಂದು ತಲೆನೋವು ಶುರುವಾಗಿದೆ.

ಕೋಲಾರ, (ಜ.07): ನನಗೆ ಇಂಧನ ಖಾತೆ ಕೊಡಲಿ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ.

ಸಂಪುಟ ವಿಸ್ತರಣೆ ಕುರಿತು ಮುಳಬಾಗಿಲು ತಾಲೂಕಿನಲ್ಲಿ ಇಂದು (ಗುರುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು.. ಸಂಪುಟ ವಿಸ್ತರಣೆ ಬೇಗ ಆಗಲೇಬೇಕು. ನಾಳೆ ನಾಳೆ ಅಂತ ಮುಂದೂಡಲಾಗುತ್ತಿದೆ. ಸಂಕ್ರಾಂತಿ ಮುಗಿದ ಬಳಿಕ ಸಂಪುಟ ವಿಸ್ತರಣೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಖಾತೆ ಬದಲಾವಣೆ ಆದ್ರೆ ಇಂಧನ ಖಾತೆ ಕೊಡಲಿ ಎಂದು ಒತ್ತಾಯಿಸಿದರು.

ಇವರಿಬ್ಬರಿಗೆ ಸಚಿವ ಸ್ಥಾನ ನೀಡಲು ಒಪ್ಪಿಗೆ ಸಿಕ್ಕಿದೆ: ಹೆಸರು ಬಹಿರಂಗಪಡಿಸಿದ ಸಚಿವ

ಎಲ್ಲರಿಗಿಂತ ಚೆನ್ನಾಗಿ ನಾನು ನಿಭಾಯಿಸಬಲ್ಲೆ. ಇಂಧನ ಇಲಾಖೆಯಲ್ಲಿ ನಂಗೆ 34 ವರ್ಷ ಅನುಭವ ಇದೆ. ನನ್ನ ಹಿನ್ನೆಲೆಯನ್ನ ಅಧ್ಯಯನ ಮಾಡಿ ಸಿಎಂ ಇಂಧನ ಖಾತೆ ಕೊಡಲಿ. ಕಾರಣಾಂತರಗಳಿಂದ ನನಗೆ ಇಂಧನ ಖಾತೆ ತಪ್ಪಿತು. ಸಿಎಂಗೂ ನನ್ನ ಬಗ್ಗೆ ಗೊತ್ತಿದೆ, ಕೊಟ್ರೆ ನಿಭಾಯಿಸುವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?