ಮಂತ್ರಿಗಿರಿಗಾಗಿ ದೆಹಲಿಗೆ ಅಲೆಯಲ್ಲ: ಎಚ್‌.ವಿಶ್ವನಾಥ್‌

Kannadaprabha News   | Asianet News
Published : Nov 29, 2020, 01:20 PM IST
ಮಂತ್ರಿಗಿರಿಗಾಗಿ ದೆಹಲಿಗೆ ಅಲೆಯಲ್ಲ: ಎಚ್‌.ವಿಶ್ವನಾಥ್‌

ಸಾರಾಂಶ

ನಾನು ಮಂತ್ರಿಗಿರಿಗಾಗಿ ಅಂಟಿಕೊಂಡವನಲ್ಲ| ಸಚಿವ ಸ್ಥಾನ ಸಿಗುತ್ತದೆ ಎಂದು ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ರಾಜೀನಾಮೆ ನೀಡಿಲ್ಲ| ರಾಕ್ಷಸ ಆಡಳಿತ ಕೊನೆಗಾಣಬೇಕು ಎಂಬ ಕಾರಣಕ್ಕಾಗಿಯೇ ನಾವು ರಾಜೀನಾಮೆ ನೀಡಿ ಹೊರ ಬಂದೆವು| ಬಿಜೆಪಿಯಲ್ಲಿ ಮೂಲ- ವಲಸಿಗ ಎಂಬುದಿಲ್ಲ. ಈ ವಿಚಾರವನ್ನು ಯಾರೂ ಮಾತನಾಡಬಾರದು: ಎಚ್‌.ವಿಶ್ವನಾಥ್‌| 

ಬಳ್ಳಾರಿ(ನ.29): ನನಗೆ ನಲವತ್ತು ವರ್ಷಗಳ ರಾಜಕೀಯ ಅನುಭವವಿದೆ. ಮಂತ್ರಿಗಿರಿಗಾಗಿ ದೆಹಲಿಗೆ ಅಲೆಯೋದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. 

ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನನ್ನ ಅನುಭವ ನೋಡಿ ಮಂತ್ರಿ ಮಾಡಬೇಕು. ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುವೆ. ಇಲ್ಲದಿದ್ದರೆ ಇಲ್ಲಿಯೇ ಇರುತ್ತೇನೆ. ಸಚಿವ ಸ್ಥಾನ ಸಿಗುತ್ತೆಂದು ಜೆಡಿಎಸ್‌- ಕಾಂಗ್ರೆಸ್‌ ಸರ್ಕಾರಕ್ಕೆ ರಾಜೀನಾಮೆ ನೀಡಲಿಲ್ಲ. ರಾಕ್ಷಸ ಆಡಳಿತ ಕೊನೆಗಾಣಬೇಕು ಎಂಬ ಕಾರಣಕ್ಕಾಗಿಯೇ ನಾವು ರಾಜೀನಾಮೆ ನೀಡಿ ಹೊರ ಬಂದೆವು ಎಂದರು.

ಜಾರಕಿಹೊಳಿಯಂತಹ ವ್ಯಕ್ತಿ ಎಲ್ಲಾ ಕಡೆ ಇರಲ್ಲ : ಈಶ್ವರಪ್ಪ

ನಾನು ಮಂತ್ರಿಗಿರಿಗಾಗಿ ಅಂಟಿಕೊಂಡವನಲ್ಲ. ಸಚಿವ ಸ್ಥಾನ ಸಿಗುತ್ತದೆ ಎಂದು ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ರಾಜೀನಾಮೆ ನೀಡಿಲ್ಲ. ರಾಕ್ಷಸ ಆಡಳಿತ ಕೊನೆಗಾಣಬೇಕು ಎಂಬ ಕಾರಣಕ್ಕಾಗಿಯೇ ನಾವು ರಾಜೀನಾಮೆ ನೀಡಿ ಹೊರ ಬಂದೆವು. ಬಿಜೆಪಿಯಲ್ಲಿ ಮೂಲ- ವಲಸಿಗ ಎಂಬುದಿಲ್ಲ. ಈ ವಿಚಾರವನ್ನು ಯಾರೂ ಮಾತನಾಡಬಾರದು. ಅದರಿಂದ ಪಕ್ಷಕ್ಕೆ ಮುಜಗರವಾಗುತ್ತದೆ. ನಾವೆಲ್ಲ ಬಿಜೆಪಿ ಟಿಕೆಟ್‌ ಪಡೆದೇ ಗೆದ್ದಿದ್ದೇವೆ. ಹೀಗಾಗಿ ಮೂಲ- ವಲಸಿಗ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ರಮೇಶ್‌ ಜಾರಕಿಹೊಳಿ ಬಗ್ಗೆ ನಮಗ್ಯಾವ ಅಸಮಾಧಾನವಿಲ್ಲ. ಊಟಕ್ಕಾಗಿ ಸೇರಿದ ಕೂಡಲೇ ಏನೇನೋ ಕಲ್ಪನೆ ಮಾಡಿಕೊಳ್ಳುವುದು ಸರಿಯಲ್ಲ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಚರ್ಚೆ ಎಲ್ಲೂ ನಡೆದಿಲ್ಲ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ