ಅವರಪ್ಪನ ಮನೆಯಿಂದ ನನಗೆ MLC ಸ್ಥಾನ ತಂದುಕೊಟ್ಟಿದ್ದಾರಾ?: ವಿಶ್ವನಾಥ್‌

Kannadaprabha News   | Asianet News
Published : Jun 20, 2021, 10:23 AM ISTUpdated : Jun 20, 2021, 10:35 AM IST
ಅವರಪ್ಪನ ಮನೆಯಿಂದ ನನಗೆ MLC ಸ್ಥಾನ ತಂದುಕೊಟ್ಟಿದ್ದಾರಾ?: ವಿಶ್ವನಾಥ್‌

ಸಾರಾಂಶ

* ಎಂಎಲ್‌ಸಿ ಸ್ಥಾನ ನಮ್ಮ ತ್ಯಾಗಕ್ಕೆ ಸಿಕ್ಕ ಪ್ರತಿಫಲವಷ್ಟೆ * ಬಿಜೆಪಿ ಸರ್ಕಾರ ನಮ್ಮ ತ್ಯಾಗದಿಂದ ರಚನೆಯಾಗಿದೆ * ಎಂಎಲ್‌ಸಿ ಸ್ಥಾನ ನಮ್ಮ ತ್ಯಾಗಕ್ಕೆ ಸಿಕ್ಕ ಪ್ರತಿಫಲವಷ್ಟೆ

ಪಿರಿಯಾಪಟ್ಟಣ(ಜೂ.20):  ವಿಧಾನ ಪರಿಷತ್‌ ಸ್ಥಾನ ನನಗೆ ಸಿಕ್ಕ ಭಿಕ್ಷೆ ಎಂದು ಹೇಳುವವರು ಏನು ಅವರಪ್ಪನ ಮನೆಯಿಂದ ತಂದು ಕೊಟ್ಟಿದ್ದಾರಾ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಖಾರವಾಗಿ ಪ್ರಶ್ನಿಸಿದ್ದಾರೆ. ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಪಡೆದ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನದ ಭಿಕ್ಷೆಯನ್ನು ರಾಜೀನಾಮೆ ಕೊಡುವ ಮೂಲಕ ಹಿಂದಿರುಗಿಸಿ ಗೌರವ ಉಳಿಸಿಕೊಳ್ಳಿ ಎಂಬ ಸರ್ಕಾರದ ವಿವಿಧ ನಿಗಮ- ಮಂಡಳಿಗಳ ಅಧ್ಯಕ್ಷರು ಹಾಕಿರುವ ಸವಾಲಿಗೆ ವಿಶ್ವನಾಥ್‌ ಈ ರೀತಿ ತಿರುಗೇಟು ನೀಡಿದ್ದಾರೆ.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಎಲ್‌ಸಿ ಸ್ಥಾನ ನಮ್ಮ ತ್ಯಾಗಕ್ಕೆ ಸಿಕ್ಕ ಪ್ರತಿಫಲವಷ್ಟೆ. ನನ್ನ ಬಗ್ಗೆ ಮಾತನಾಡಲು ಅವರಿಗೆ ಏನು ಅಧಿಕಾರವಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

'ವಿಶ್ವನಾಥ್‌ ರಾಜೀನಾಮೆ ನೀಡಿ, ಇಲ್ಲವೆ ಅಪಮಾನ ಎದುರಿಸಲು ಸಿದ್ಧರಾಗಿ'

ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಅಂಗವಾಗಿರುವ ಎಲ್ಲರೂ ನಮ್ಮ ಮರ್ಜಿಯಲ್ಲಿದ್ದಾರೆಯೇ ಹೊರತು ನಾನು ಅವರ ಮರ್ಜಿಯಲ್ಲಿಲ್ಲ. ಈಗಿನ ಬಿಜೆಪಿ ಸರ್ಕಾರ ನಮ್ಮ ತ್ಯಾಗದಿಂದ ರಚನೆಯಾದದ್ದು, ಸರ್ಕಾರದಲ್ಲಿ ಸಚಿವರು, ನಿಗಮ ಮಂಡಳಿ ಅಧ್ಯಕ್ಷ, ಸದಸ್ಯರಾಗಿರುವ ಎಲ್ಲರೂ ಸೀದಾ ಬಂದಿದ್ದರೆ ಅವರೆಲ್ಲ ನಮ್ಮ ತ್ಯಾಗದಿಂದ ಅಧಿಕಾರ ಪಡೆದವರು ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು