ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

Published : Sep 13, 2021, 05:05 PM ISTUpdated : Sep 13, 2021, 05:06 PM IST
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

ಸಾರಾಂಶ

* ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ * ಸಚಿವ ವಿ. ಸೋಮಣ್ಣ ಬದಲಾವಣೆ * ಸಚಿವ ಹಾಲಪ್ಪ ಆಚಾರ್​ಗೆ ರಾಯಚೂರು ಉಸ್ತುವಾರಿ

ಬೆಂಗಳೂರು, (ಸೆ.13): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ರಾಯಚೂರಿಗೆ ಹೊಸ ಜಿಲ್ಲಾ ಉಸ್ತುವಾರಿಯ ಆದೇಶವನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಪ್ರಕಟಿಸಿದ್ದಾರೆ.

ಹೌದು... ಸಚಿವ ವಿ. ಸೋಮಣ್ಣ ಬದಲಾಗಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್​ಗೆ ರಾಯಚೂರು ಉಸ್ತುವಾರಿಯನ್ನು ವಹಿಸಲಾಗಿದೆ.

ಬೊಮ್ಮಾಯಿ ಸರ್ಕಾರದಲ್ಲಿ ಹುದ್ದೆಗಾಗಿ ಪೈಪೋಟಿ : ಹಳಬರಿಗೆ ಕೊಕ್?

ಈ ಕುರಿತು ಇಂದು (ಸೆ.13) ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಆದೇಶ ಹೊರಡಿದ್ದಾರೆ. ಕೊಪ್ಪಳ ಜಿಲ್ಲೆಯ ಉಸ್ತುವಾರಿಯ ಜೊತೆಗೆ ರಾಯಚೂರು ಜಿಲ್ಲಾ ಉಸ್ತುವಾರಿಯನ್ನು ಸಹ ಸಚಿವ ಹಾಲಪ್ಪ ಆಚಾರ್​ಗೆ ನೀಡಲಾಗಿದೆ.

ವಿ ಸೋಮಣ್ಣ ಅವರು ಬೆಂಗಳೂರಿನಿಂದ ಬರಬೇಕಾಗುತ್ತದೆ. ಹೀಗಾಗಿ ಹಾಲಪ್ಪ ಆಚಾರ್​ ಅವರು ಪಕ್ಕದ ಕೊಪ್ಪಳ ಜಿಲ್ಲೆಯವರಾಗಿದ್ದರಿಂದ ರಾಯಚೂರು ಸಹ ಅವರ ಹೆಗಲಿಗೆ ಹಾಕಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2028ರವರೆಗೂ ಸಿದ್ದುವೇ ಸಿಎಂ : ಬೆಂಬಲಿಗರ ಬ್ಯಾಟಿಂಗ್‌
ಸಮರೋಪಾದಿಯಲ್ಲಿ ವಿಜಯೇಂದ್ರ ಪಕ್ಷ ಸಂಘಟನೆ