ಬಿಟ್ ಕಾಯಿನ್... ಯಾವ ಬಿಟ್ , ನನಗೆ ಪೊಲೀಸ್ ಬೀಟ್ ಮಾತ್ರ ಗೊತ್ತು!

Published : Nov 02, 2021, 04:34 PM IST
ಬಿಟ್ ಕಾಯಿನ್... ಯಾವ ಬಿಟ್ , ನನಗೆ ಪೊಲೀಸ್ ಬೀಟ್ ಮಾತ್ರ ಗೊತ್ತು!

ಸಾರಾಂಶ

* ಕರ್ನಾಟಕ ಉಪಚುನಾವಣಾ ಫಲಿತಾಂಶ * ಎರಡು ಕ್ಷೇತ್ರ ಗೆಲ್ಲುವ ತವಕದಲ್ಲಿ ಇದ್ವಿ ಎಂದ ಸೋಮಣ್ಣ *  ದೇಶದ, ರಾಜ್ಯದ ಯಾವುದೇ ಪ್ರಚಲಿತ ವಿದ್ಯಮಾನಕ್ಕೆ ಅನುಗುಣವಾಗಿ ಜನ ಮತದಾನ ಮಾಡಿಲ್ಲ *  ಎಲ್ಲಾರೂ ಒಟ್ಟಾಗಿ ಒಗ್ಗಟ್ಟಾಗಿ ಪ್ರಚಾರ ಮಾಡಿದ್ದೇವೆ

ಬೆಂಗಳೂರು (ನ. 02) ಉಪಚುನಾವಣೆಯಲ್ಲಿ (Karnataka By Poll) ಎರಡು ಕ್ಷೇತ್ರ ಗೆಲ್ಲುವ ತವಕದಲ್ಲಿ ಇದ್ದಿದ್ದೆವು. ಆದರೆ ಹಾನಗಲ್ಲಿ ಸಣ್ಣ ಪ್ರಮಾಣದಲ್ಲಿ ಸೋಲಾಗಿದೆ. ದೇಶದ, ರಾಜ್ಯದ ಯಾವುದೇ ಪ್ರಚಲಿತ ವಿದ್ಯಮಾನಕ್ಕೆ ಅನುಗುಣವಾಗಿ ಜನ ಮತದಾನ ಮಾಡಿಲ್ಲ. ಎಲ್ಲಾರೂ ಒಟ್ಟಾಗಿ ಒಗ್ಗಟ್ಟಾಗಿ ಪ್ರಚಾರ ಮಾಡಿದ್ದೇವೆ. ಸಿಂಧಗಿಯಲ್ಲಿ ಅಭೂತಪೂರ್ವ ಗೆಲವು ನೀಡಿದ್ದಾರೆ. ಎಂಟನೇ ತಾರೀಖಿನ ಬಳಿಕ ಸಿಂಧಗಿಗೆ ಹೋಗ್ತೇವೆ ಎಂದು ಸಚಿವ (V Somanna) ವಿ ಸೋಮಣ್ಣ ಹೇಳಿದ್ದಾರೆ.

ಹಾನಗಲ್ ಲ್ಲಿ ಉದಾಸಿಯವರು ಶಾಸಕ ಆದ ಮೇಲೆ ಅನಾರೋಗ್ಯ ಕಾರಣಕ್ಕೆ ಹೆಚ್ಚು ಓಡಾಟ ಮಾಡೋಕೆ ಆಗಿರಲಿಲ್ಲ . ಹೀಗಾಗಿ ಮಾನೆ ಈಗ ಗೆದ್ದಿದ್ದಾರೆ. ಇದು ಮಾನೆ ವೈಯಕ್ತಿಕ ವರ್ಚಸ್ಸಿನ ಗೆಲುವು. ಹಾನಗಲ್ ಗೆಲುವು ಕಾಂಗ್ರೆಸ್ ಗೆಲುವಲ್ಲ . ಹಾನಗಲ್(Hangal) ಲ್ಲಿ ಬಿಜೆಪಿ (BJP) ವೋಟ್ ಎಲ್ಲೂ ಹೋಗಿಲ್ಲ. ನಮ್ಮ ಮತ ನಮ್ಮಲ್ಲೇ ಇದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಶಕ್ತಿಶಾಲಿಯಾಗಿ ಬರುತ್ತೇವೆ ಎಂದು ಹೇಳಿದರು.

'ಏನಿದು ಬಿಟ್ ಕಾಯಿನ್ ದಂಧೆ.. ಕರ್ನಾಟಕಕ್ಕೆ ಸುತ್ತಿಕೊಂಡಿದ್ದು ಹೇಗೆ?

ನಾವು ಸಾಮೂಹಿಕ ಚುನಾವಣೆ ಎದುರಿಸಿದ್ದೇವೆ. ಸಿಂಧಗಿಯಲ್ಲಿ ಮುಸ್ಲಿಮರು ಅತಿ ಹೆಚ್ಚು ಮತ ಹಾಕಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಅಂತ ಅಮಿತ್ ಶಾ ಹೇಳಿದ್ದಾರೆ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೇವೆ ಎಂದರು.

ಬಿಟ್ ಕಾಯಿನ್(Bitcoin) ಪ್ರಕರಣ; ಯಾವ ಬಿಟ್ , ನನಗೆ ಪೊಲೀಸ್ ಬೀಟ್ ಮಾತ್ರ ಗೊತ್ತು! ಸಿದ್ದರಾಮಯ್ಯ ವಿಪಕ್ಷ ನಾಯಕರು ಆ ಪುಣ್ಯಾತ್ಮಗೆ ಹೇಳಿ ಎಂದ ಸೋಮಣ್ಣ.. ಬೊಮ್ಮಾಯಿ ಗೆ ಒಳ್ಳೆಯ ಇತಿಹಾಸ ಇದೆ. ಒಳ್ಳೆಯ ಕುಟುಂಬದಿಂದ ಬಂದವರು. ನಿಖರತೆ ಇಟ್ಟು ಸಿದ್ದರಾಮಯ್ಯ ಮಾತಾಡಲಿ ಎಂದು ಸೋಮಣ್ಣ ಸಲಹೆ ನೀಡಿದರು.

ಆರು ಸಾವಿರದಿಂದ ಗೆದ್ದಿರೋದಕ್ಕೆ ಸಿದ್ದರಾಮಯ್ಯ ಜಂಬ ಕೊಚ್ಚಿಕೊಂಡ್ರೆ. 32 ಸಾವಿರ ಮತಗಳಿಂದ ಗೆದ್ದ ನಾವು ಎಷ್ಟು ಜಂಬ ತೋರಬೇಕು? ಪಂಚಮಸಾಲಿ ಮತ ಕೂಡ ಒಡೆದು ಹೋಗಿಲ್ಲ. ಯಡಿಯೂರಪ್ಪರು, ವಿಜಯೇಂದ್ರ ಎಲ್ಲಾರೂ ಪ್ರಚಾರ ಮಾಡಿದ್ದಾರೆ. ಬಿಟ್ ಕಾಯಿನ್ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಸಚಿವ ಸಿಸಿ ಪಾಟೀಲ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!