ಪೊಲೀಸರಿಂದ ಕಿರುಕುಳ: ಡಿಕೆಶಿ ಮುಂದೆ ಶಾಸಕಿ ರೂಪಕಲಾ ಕಣ್ಣೀರು!

Published : May 25, 2023, 09:42 AM IST
ಪೊಲೀಸರಿಂದ ಕಿರುಕುಳ: ಡಿಕೆಶಿ ಮುಂದೆ ಶಾಸಕಿ ರೂಪಕಲಾ ಕಣ್ಣೀರು!

ಸಾರಾಂಶ

‘ಚುನಾವಣೆ ಸಮಯದಲ್ಲಿ ಪೊಲೀಸರು ನನಗೆ ಹಾಗೂ ನಮ್ಮ ಕಾರ್ಯಕರ್ತರಿಗೆ ಸಾಕಷ್ಟುಕಿರುಕುಳ ನೀಡಿದ್ದಾರೆ. ನನ್ನ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕದ್ದು ಮುಚ್ಚಿ ಓಡಾಡುವಂತಹ ಸ್ಥಿತಿ ನಿರ್ಮಿಸಿದ್ದರು’ ಎಂದು ಪೊಲೀಸರ ಕಿರುಕುಳ ನೆನೆಯುತ್ತಾ ಕೆಜಿಎಫ್‌ ಶಾಸಕಿ ರೂಪಕಲಾ ಶಶಿಧರ್‌ ಅವರು ಡಿ.ಕೆ.ಶಿವಕುಮಾರ್‌ ಬಳಿ ಕಣ್ಣೀರು ಸುರಿಸಿದ ಘಟನೆ ಬುಧವಾರ ನಡೆದಿದೆ. 

ಬೆಂಗಳೂರು (ಮೇ.25): ‘ಚುನಾವಣೆ ಸಮಯದಲ್ಲಿ ಪೊಲೀಸರು ನನಗೆ ಹಾಗೂ ನಮ್ಮ ಕಾರ್ಯಕರ್ತರಿಗೆ ಸಾಕಷ್ಟುಕಿರುಕುಳ ನೀಡಿದ್ದಾರೆ. ನನ್ನ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕದ್ದು ಮುಚ್ಚಿ ಓಡಾಡುವಂತಹ ಸ್ಥಿತಿ ನಿರ್ಮಿಸಿದ್ದರು’ ಎಂದು ಪೊಲೀಸರ ಕಿರುಕುಳ ನೆನೆಯುತ್ತಾ ಕೆಜಿಎಫ್‌ ಶಾಸಕಿ ರೂಪಕಲಾ ಶಶಿಧರ್‌ ಅವರು ಡಿ.ಕೆ. ಶಿವಕುಮಾರ್‌ ಬಳಿ ಕಣ್ಣೀರು ಸುರಿಸಿದ ಘಟನೆ ಬುಧವಾರ ನಡೆದಿದೆ. 

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಮುಗಿಸಿ ಬೇರೆ ಶಾಸಕರು ಹೊರಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಳಿ ಬಂದ ಸಚಿವ ಕೆ.ಎಚ್‌. ಮುನಿಯಪ್ಪ ಪುತ್ರಿ ರೂಪಕಲಾ ನನ್ನ ವಿರುದ್ಧ ಸುಳ್ಳು ಕೇಸು ದಾಖಲಿಸಿ ಕಿರುಕುಳ ನೀಡಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕಾರ್ಮಿಕರಿಗೆ ಆಹಾರ ಕಿಟ್‌ ನೀಡಿದ್ದಕ್ಕೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ನನ್ನನ್ನು ಮೊದಲ ಆರೋಪಿ ಮಾಡಿದ ಕಾರಣ ಕದ್ದು ಮುಚ್ಚಿ ಓಡಾಡುವ ಸ್ಥಿತಿ ಬಂದಿತ್ತು. ಚುನಾವಣಾ ಅಧಿಕಾರಿಗಳ ಮಾತು ಕೇಳಿಕೊಂಡು ಪೊಲೀಸರು ತುಂಬಾ ಕಿರುಕುಳ ನೀಡಿದ್ದಾರೆ. ವಿನಾಕಾರಣ ಕಿರುಕುಳ ನೀಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ದುಃಖ ತೋಡಿಕೊಳ್ಳುತ್ತಾ ಕಣ್ಣೀರಾದರು.

ಅರಣ್ಯ ಇಲಾಖೆ ಸಸಿಗಳ ಬೆಲೆ ವಿಪರೀತ ಹೆಚ್ಚಳ: ಅನ್ನದಾತರ ಆಕ್ರೋಶ

ಕೆಜಿಎಫ್‌ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಸಲು ಆದ್ಯತೆ: ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುತ್ತಿದ್ದಂತೆ ಸ್ಥಳೀಯ ಶಾಸಕಿ ರೂಪಕಲಾ ಶಶಿಧರ್‌ರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಿಕೊಡಬೇಕೆಂದು ಮುಖಂಡರು, ಕಾರ್ಯಕರ್ತರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ರೂಪಕಲಾ ಶಶಿಧರ್‌ ಆಯ್ಕಾಯಾಗಿದ್ದಾರೆ. 

ಮೋದಿ ಪ್ರಧಾನಿಯಾಗಿ 9 ವರ್ಷ: ಬಿಜೆಪಿಯಿಂದ 1 ತಿಂಗಳ ಅಭಿಯಾನ

ಈ ಬಾರಿ ಪರಿಶಿಷ್ಟ ಜಾತಿ ಎಡಗೈ ಸಮುದಾಯದ 11 ಮಂದಿ ಅಭ್ಯರ್ಥಿಗಳಲ್ಲಿ ರೂಪಕಲಾ ಶಶಿಧರ್‌ರವನ್ನು ಸಾಮಾಜಿಕ ನ್ಯಾಯ ಮತ್ತು ಮಹಿಳಾ ಕೋಟಾ ಪರಿಕಲ್ಪನೆಯಡಿಯಲ್ಲಿ ಪರಿಗಣಿಸಿ ಸಚಿವ ಸ್ಥಾನವನ್ನು ನೀಡಿದಲ್ಲಿ ಕೆಜಿಎಫ್‌ ಕ್ಷೇತ್ರವನ್ನು ಮತ್ತು ಕೋಲಾರ ಜಿಲ್ಲೆಯನ್ನು ಇಡೀ ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡಲು ಸಹಕಾರಿಯಾಗಲಿದೆ ಎನ್ನುವುದು ಎಲ್ಲರ ಒತ್ತಾಯವಾಗಿದೆ. ಕೆಜಿಎಫ್‌ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಇವರಿಗೆ ಸಚಿವ ಸ್ಥಾನವನ್ನು ನೀಡಬೇಕಾಗಿದೆ ಎಂದು ನಗರಸಭೆ ಸದಸ್ಯ ಮಾಣಿಕ್ಯಂ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ