ಹರಿಯಾಣ ಸೋಲು ತೀವ್ರ ಬೇಸರ: ಮಲ್ಲಿಕಾರ್ಜುನ ಖರ್ಗೆ

Published : Oct 13, 2024, 10:45 AM IST
ಹರಿಯಾಣ ಸೋಲು ತೀವ್ರ ಬೇಸರ: ಮಲ್ಲಿಕಾರ್ಜುನ ಖರ್ಗೆ

ಸಾರಾಂಶ

ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಇಡೀ ದೇಶದ ಜನರಲ್ಲಿ ವಿಶ್ವಾಸವಿತ್ತು. ಆ ಕಾಣಕ್ಕಾಗಿಯೇ ಮಾಧ್ಯಮ, ಜನ ಸಮುದಾಯದಲ್ಲಿ ಜನರ ಅಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು. ಆದಾಗ್ಯೂ ಚುನಾವಣಾ ಫಲಿತಾಂಶ ಬೇರೆಯದ್ದೇ ರೀತಿಯಲ್ಲಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 

ಕಲಬುರಗಿ(ಅ.13):  ಇತ್ತೀಚೆಗೆ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವುದು ತಮಗೆ ತೀವ್ರ ಬೇಸರ ಉಂಟು ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಇಡೀ ದೇಶದ ಜನರಲ್ಲಿ ವಿಶ್ವಾಸವಿತ್ತು. ಆ ಕಾಣಕ್ಕಾಗಿಯೇ ಮಾಧ್ಯಮ, ಜನ ಸಮುದಾಯದಲ್ಲಿ ಜನರ ಅಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು. ಆದಾಗ್ಯೂ ಚುನಾವಣಾ ಫಲಿತಾಂಶ ಬೇರೆಯದ್ದೇ ರೀತಿಯಲ್ಲಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಾತಿಗಣತಿ ವರದಿ ಬಗ್ಗೆ ರಾಜ್ಯ ನಾಯಕರನ್ನೇ ಕೇಳಿ: ಮಲ್ಲಿಕಾರ್ಜುನ ಖರ್ಗೆ

ಈ ರೀತಿಯ ವ್ಯತಿರಿಕ್ತ ಫಲಿತಾಂಶ ಬರಲು ಏನು ಕಾರಣ ಎನ್ನುವುದರ ಬಗ್ಗೆ ವಿಶ್ಲೇಷಣೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬೂತ್‌ಮಟ್ಟದಿಂದ ವರದಿ ತರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಆ ವರದಿ ಬಂದ ಬಳಿಕ ಫಲಿತಾಂಶದ ಕುರಿತು ಸ್ಪಷ್ಟವಾಗಿ ಮಾತನಾಡುವುದು ಸರಿ ಎನಿಸುತ್ತದೆ. ಎಲ್ಲವೂ ನಮ್ಮ ಪರವಾಗಿಯೇ ಇದ್ದರೂ ಫಲಿತಾಂಶ ಮಾತ್ರ ಏಕೆ ಹೀಗಾಯಿತು ಎಂಬುದು ತಿಳಿಯದಾಗಿದೆ ಎಂದು ಅಚ್ಚರಿ ಹೊರಹಾಕಿದರು.
ಚುನಾವಣಾ ಪ್ರಕ್ರಿಯೆ ಸರಿ ಇದೆಯೋ, ಇಲ್ಲವೋ ಎಂಬುದರ ಬಗ್ಗೆ ಈಗಲೇ ಏನನ್ನೂ ಹೇಳಲ್ಲ ಎಂದರಲ್ಲದೆ, ಬೂತ್ ಮಟ್ಟದ ವರದಿ ಕೈ ಸೇರಿದ ನಂತರ ಯಾವ ಹಂತದಲ್ಲಿ ತಪ್ಪಾಗಿದೆ ಎಂಬುದು ಗೊತ್ತಾಗಲಿದೆ ಎಂದು ನುಡಿದರು.

ಒಂದೊಮ್ಮೆ ವರದಿ ಬಂದ ಬಳಿಕ ತಪ್ಪು ನಮ್ಮ ಪಕ್ಷದ ಕಾರ್ಯಕರ್ತರದ್ದೋ, ಚುನಾವಣಾ ಪ್ರಕ್ರಿಯೆಯಲ್ಲಿ ಏನಾದರೂ ಗಡಿಬಿಡಿ ನಡೆದಿದೆಯೋ ಎಂಬುದರ ಕುರಿತು ಸ್ಪಷ್ಟ ಚಿತ್ರಣ ಲಭಿಸಲಿದೆ ಎಂದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ